21 ರಿಂದ ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ
ಡಾಕ್ಟರ್ ಬಿ .ಆರ್ ಅಂಬೇಡ್ಕರ್ ರವರ 126 ನೇ ಜನ್ಮ ಜಯಂತಿಯ ಅಂಗವಾಗಿ ಸಾಮಾಜಿಕ ನ್ಯಾಯದ ಪುನರ್ ಸ್ಥಾಪನೆ ಮತ್ತು ಪ್ರಸ್ತುತ ಪರಿಸ್ಥಿತಿಯಲ್ಲಿ ಅಂಬೇಡ್ಕರ್ ರವರನ್ನು ಹೊಸ ದೃಷ್ಟಿಯಲ್ಲಿ ನೋಡುವ ಅಂತಾರಾಷ್ಟ್ರೀಯ ಸಮ್ಮೇಳನ ಜುಲೈ 21,22 ಮತ್ತು 23 ರಂದು ಬೆಂಗಳೂರಿನ ಕೃಷಿ ವಿಶ್ವ ವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಸೋನಿಯಾ ಗಾಂಧಿಯವರನ್ನು ಆಹ್ವಾನಿಸಲಾಗಿದ್ದು ಅವರು ಬರುವ ಸಾಧ್ಯತೆಗಳಿವೆ
ಈ ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಮಟ್ಟದ 83 ,ರಾಷ್ಟ್ರೀಯ ಮಟ್ಟದ 140 ಹಾಗು ರಾಜ್ಯದ 80 ಕ್ಕೂ ಹೆಚ್ಚು ಭಾಷಣಕಾರರು ತಮ್ಮ ವಾದವನ್ನು ಮಂಡಿಸಲಿದ್ದಾರೆ 2000 ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆ ಇದೆ .
‘ ರೀ ಕ್ಲೆಯ್ಮಿಂಗ್ ಸೋಶಿಯಲ್ ಜಸ್ಟಿಸ್ ಅಂಡ್ ರಿವಿಸ್ಟಿಂಗ್ ಅಂಬೇಡ್ಕರ್’
ಎಂಬ ವಿಷಯದ ಮೇಲೆ ನಡೆಯಲಿರುವ ಈ ಸಮ್ಮೇಳನಕ್ಕೆ ಮಾರ್ಟಿನ್ ಲೂಥರ್ ಕಿಂಗ್ -3 ಮತ್ತು ರಾಹುಲ್ ಗಾಂಧಿ ಮುಖ್ಯ ಅಥಿತಿಗಳಾಗಿ ಆಗಮಿಸಲಿದ್ದಾರೆ ಸಾಮಾಜಿಕ ನ್ಯಾಯದ ಪರಿಕಲ್ಪನೆ , ರಾಜಕೀಯ ನ್ಯಾಯದ ಪರಿಕಲ್ಪನೆ, ಆರ್ಥಿಕ ನ್ಯಾಯ, ಸಾಮಾಜಿಕ ನ್ಯಾಯ,ಸಾಮಾಜಿಕ ಮತ್ತು ಸಾಂಸ್ಕೃತಿಕ ,ಪ್ರಭಾವಲಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಜ್ಞರು ಸಮ್ಮೇಳನದಲ್ಲಿ ಮಾತನಾಡಲಿದ್ದಾರೆ.
ಇನ್ನು ಅನೇಕ ಗಣ್ಯರು ಭಾಗವಹಿಸುತ್ತಾರೆ
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛೆ ಇದ್ದರೆ ನಿಮ್ಮ ಹೆಸರುಗಳನ್ನೂ ಈ ಕೂಡಲೇ ನೊಂದಾಯಿಸಿಕೊಳ್ಳಿ ,ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಕೊಂಡಿ ಕ್ಲಿಕ್ ಮಾಡಿ
https://www.questforequity.org/landingpage.html
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
