ರಾಜಾಜಿನಗರ ಮೆಟ್ರೊದಲ್ಲಿನ ಹಿಂದಿ ನಾಮಫಲಕಕ್ಕೆ ಮಸಿಬಳಿಯಲು ಮುಂದಾದ ಕನ್ನಡಪರ ಹೋರಾಟಗಾರರು.
ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಒತ್ತಾಯಪೂರ್ವಕ ಹಿಂದಿ ಹೇರಿಕೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಅನೇಕ ಹೋರಾಟಗಳನ್ನು ಮಾಡುತ್ತಾ ಬಂದಿವೆ. ಹಿಂದಿಯನ್ನು ತಮಿಳುನಾಡು ಮತ್ತು ಕೇರಳ ಮೆಟ್ರೋದಲ್ಲಿ ಹೇರಿಕೆ ಮಾಡಿಲ್ಲ.ಆದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತುದೆ. ಬೆಂಗಳೂರಿನ ಮೆಟ್ರೋ ನಿಲ್ದಾಣದಳಲ್ಲಿ ಹಿಂದಿ ಬಳಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಹೋರಾಟಗಳು ನಡೆಯುತ್ತಿವೆ.ಇಂದು ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಮೇಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಹೇರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಒತ್ತಾಯಪೂರ್ವಕವಾಗಿ ಬೆಂಗಳೂರು ನಮ್ಮಮೆಟ್ರೋದಲ್ಲಿ ಹಿಂದಿ ಹೇರಲು ಹೊರಟಿರುವ ಕೇಂದ್ರ ಸರ್ಕಾರದ ವಿಯುದ್ದ ಆಕ್ರೋಶ ವ್ಯಕ್ತಪಡಿಸಿ, ರಾಜಾಜಿನಗರ ಮೆಟ್ರೋ ಸ್ಟೇಷನ್ ನ ಹಿಂದಿ ನಾಮಫಲಕಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಯಾಗಿ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು. ಕನ್ನಡ ಸಂಘಟನೆಯ ಕಾರ್ಯಕರ್ತರು ಮೆಟ್ರೋ ಮುಂಭಾಗ ಕುಳಿತು ತಮ್ಮ ಪ್ರತಿಭಟನೆ ಮುಂದುವರಿಸಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
