ಭಾನುವಾರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಭಕ್ತಾದಿಗಳಿಗೆ ಎರಡು ದಿನ ದೇವರ ದರ್ಶನ ನಿಷೇದ..
ಪ್ರಧಾನಿ ನರೇಂದ್ರ ಮೋದಿ ಇದೇ ಅ.29 ಅಂದರೆ ಭಾನುವಾರ ಕರ್ನಾಟಕದ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.. ತಾವು ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ.. ಮುಂದೆ ಓದಿ
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಮಂಜುನಾಥ ಸ್ವಾಮಿಯ ಭಕ್ತರಿಗೆ ಎರಡು ದಿನಗಳ ಕಾಲ ದರ್ಶನವನ್ನು ನಿರ್ಬಂಧಿಸಲಾಗಿದೆ..ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ ತಿಳಿಸಿದೆ.
ಅಕ್ಟೋಬರ್ 29ರ ಭಾನುವಾರ ಬೆಳಿಗ್ಗೆ 11.30ಕ್ಕೆ ಪ್ರಧಾನಿ ಮೋದಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.. ಈ ವೇಳೆ ಭದ್ರತೆ ಕಲ್ಪಿಸಲು 2,500ಕ್ಕೂ ಹೆಚ್ಚು ಪೊಲೀಸರುಗಳನ್ನೊಳಗೊಂಡ ಹತ್ತು ಎಸ್ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್ಪಿ, ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ 150 ಮಂದಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
