fbpx
ಮಾಹಿತಿ

ಬಿಪಿಎಲ್ ಪಡಿತರ ಚೀಟಿದಾರರ ಪಡಿತರ ವಿತರಣೆಗೆ ಹೊಸ ವ್ಯವಸ್ಥೆ ಜಾರಿ..!

ಬಿಪಿಎಲ್ ಪಡಿತರ ಚೀಟಿದಾರರ ಪಡಿತರ ವಿತರಣೆಗೆ ಹೊಸ ವ್ಯವಸ್ಥೆ ಜಾರಿ..!

 

 

ಬಿಪಿಎಲ್ ಕಾರ್ಡ್ ಉಳ್ಳವರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಆಹಾರ ಪದಾರ್ಥಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿ 30 ಲಕ್ಷ ಹೊಸ ಪಡಿತರ ಚೀಟಿಗೆ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಬಂದಿದ್ದು, ಶೀಘ್ರದಲ್ಲೆ ಹೊಸ ಪಡಿತರ ಚೀಟಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಗುವುದು ಎಂದು ತಿಳಿಸಿದರು.

 

 

ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಆಹಾರ ಧಾನ್ಯ ವಿತರಣೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಮತ್ತು ಎಪಿಎಲ್ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮತ್ತು ವಿತರಣೆ ಎಲ್ಲವೂ ಕೂಡ ಪಾರದರ್ಶಕವಾಗಿರಲೆಂದು ಆನ್‌ಲೈನ್ ಮೂಲಕವೆ ವ್ಯವಸ್ಥೆ ಕಲ್ಪಿಸಲಾಗಿದೆ.ಡಿಸೆಂಬರ್ 15ರೊಳಗೆ ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಕಾರ್ಡ್ ವಿತರಿಸಲಾಗುವುದು. ಸದ್ಯ 16 ಲಕ್ಷ ಜನ ಅರ್ಜಿ ಸಲ್ಲಿಸಿದ್ದು, ಈ ಪೈಕಿ ಈಗಾಗಲೇ 10 ಲಕ್ಷ ಜನರಿಗೆ ಕಾರ್ಡ್ ವಿತರಿಸಲಾಗಿದೆ. ಎಂದು ಖದರ್ ತಿಳಿಸಿದರು.

 

 

ಹೊಸದಾಗಿ ಜಾರಿಗಿರುವ ಪಡಿತರ ವ್ಯವಸ್ಥೆಯ ಪ್ರಕಾರ ಬಿಪಿಎಲ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗಿದ್ದರೆ ಸಾಕು ರಾಜ್ಯದ ಯಾವ ಭಾಗದ ನ್ಯಾಯಬೆಲೆ ಅಂಗಡಿಯಲ್ಲಾರೂ ತಮ್ಮ ಪಾಲಿನ ಆಹಾರ ಪದಾರ್ಥಗಳನ್ನು ಪಡೆದುಕೊಳ್ಳಬಹುದು. ಮುಂದಿನ ದಿನಗಳಲ್ಲಿ ಪಡಿತರಚೀಟಿ ಪಡೆಯಲು ಆಧಾರ್ ನಂಬರ್ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಸೇರಿದಂತೆ ಯಾವುದೇ ದಾಖಲೆಗಳ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top