fbpx
ಸಮಾಚಾರ

ಫೇಸ್‍ಬುಕ್‍ ಲೈವ್‍ನಲ್ಲಿ ಬಂದು ಸಂಸದ ಪ್ರತಾಪ್ ಸಿಂಹ ಕೊಟ್ರು ಖಡಕ್ ವಾರ್ನಿಂಗ್

ಭೀಕರ ಮಳೆಯಿಂದ ಜಲಾವೃತ ಆಗಿರುವ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ಸೇತುವೆ ಹಾಗು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯಾಚರಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಖುದ್ದಾಗಿ ಭಾಗವಹಿಸಿದ್ದರು, ಇನ್ನು ಪ್ರವಾಹ ರಕ್ಷಣಾ ಕಾರ್ಯಾಚರಣೆಯ ಪ್ರಾರಂಭವಾದ ದಿನದಿಂದಲೂ ಖುದ್ದಾಗಿ ಸ್ಥಳಕ್ಕೆ ತೆರಳಿ ನಿರಾಶ್ರಿತರ ಅಗತ್ಯತೆಗಳಿಗೆ ಸಂಸದ ಪ್ರತಾಪ್ ಸಿಂಹ ಸ್ಪಂದಿಸುತ್ತಿದ್ದಾರೆ.

ಆದರೆ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಪ್ರತಾಪ್ ಸಿಂಹ ಎಲ್ಲಿ ಎಂದು ಕೇಳುತ್ತಿದ್ದಾರೆ. ಕೆಲವರಂತೂ ಅವಾಚ್ಯ ಪದಬಳಕೆ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಇದು ಸಹಜವಾಗಿಯೇ ಸಂಸದ ಪ್ರತಾಪ್ ಸಿಂಹ ಅವರ ಪಿತ್ತವನ್ನು ನೆತ್ತಿಗೇರಿಸಿದೆ. ಈ ಕುರಿತು ಫೇಸ್ಬುಕ್ ಲೈವ್ ಮಾಡಿರುವ ಪ್ರತಾಪ ಸಿಂಹ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಿಡುಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಡಿಯೋ ನೋಡಿ:

 

ಈ ಕುರಿತು ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ ಅವರು, ಬಾಯಿಗೆ ಬಂದ ಹಾಗೆ ಕಮೆಂಟ್ ಮಾಡೋದು ಸರಿಯಲ್ಲ. ನನಗೂ ಎಲ್ಲಾ ಭಾಷೆಯಲ್ಲೂ ಬೈಯೋಕೆ ಬರುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. “ಕೊಡಗು ಕೊಚ್ಚಿ ಹೋಗುತ್ತಿದೆ, ಪ್ರತಾಪ್ ಸಿಂಹ ಎಲ್ಲಿ ಎನ್ನುತ್ತೀರಲ್ಲ. ನಾನು ಮಳೆ ಶುರು ಆಗಿದಾಗಿನಿಂದಲೇ ಕೊಡಗಿನಲ್ಲೇ ಇದ್ದೇನೆ. ನಾನುಮತ್ತು ನನ್ನ ಕಾರ್ಯಕರ್ತರು ಅವರ ನೆರವಿಗೆ ಧಾವಿಸಿದ್ದೇವೆ. ಮೊದಲು ನಾವೇ ಅಲ್ಲಿ ಪರಿಹಾರ ಕೇಂದ್ರ ತೆರೆದಿದ್ದು. ಈಗಲೂ ನಾವು ಇಲ್ಲೇ ಇದ್ದು ಅವರ ಬೆಂಬಲಕ್ಕೆ ನಿಂತಿದ್ದೇವೆ. ಇನ್ನಾದರೂ ಅವಾಚ್ಯ ಶಬ್ಧ ಬಳಕೆ ಮಾಡದೇ ಒಳ್ಳೆಯ ಶಬ್ಧಗಳಿಂದ ಟೀಕೆ ಮಾಡಿ. ನನಗೂ ಆ ರೀತಿ ಮಾತಾಡೋಕೆ ಬರುತ್ತೆ” ಎಂದು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top