ಹಿರಿಯ ನಟಿ ಲೀಲಾವತಿಯವರ ಪುತ್ರ ನಟ ವಿನೋದ್ ರಾಜ್ ಅವರಿಗೆ ಸೇರಿದ ಒಂದು ಲಕ್ಷ ರೂಪಾಯಿ ಹಣವನ್ನು ಹಾಡು ಹಗಲೇ ಖದೀಮರು ಎಗರಿಸಿದ್ದಾರೆ. “ಸರ್ ನಿಮ್ ಕಾರಿನ ಟೈರ್ ಪಂಚರ್ ಆಗಿದೆ” ಎಂದು ಹೇಳಿ,ವಿನೋದ್ ರಾಜ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಚೋರರು ಕಾರಿನಿಂದ 1 ಲಕ್ಷ ರೂ. ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ನೆಲಮಂಗಲ ಪಟ್ಟಣ ವ್ಯಾಪ್ತಿಯಲ್ಲಿರುವ ಇಂಡಸ್ಲ್ಯಾಂಡ್ ಬ್ಯಾಂಕ್ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ವಿನೋದ್ ರಾಜ್ ಅವರು ತಮ್ಮ ಹಣ ಕಳ್ಳತನ ಆಗಿರುವ ಬಗ್ಗೆ ಕಂಪ್ಲೆಂಟ್ ದಾಖಲಿಸಿದ್ದಾರೆ.. ಚಿತ್ರೋದ್ಯಮದಿಂದ ದೂರ ಉಳಿದು ಕೃಷಿ ಚಟುವಟಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡಿರುವ ವಿನೋದ್ ರಾಜ್ ಅವರು ತೋಟದ ಕೂಲಿಯಾಳುಗಳಿಗೆ ಸಂಬಳ ನೀಡುವುದಕ್ಕಾಗಿ ಬ್ಯಾಂಕ್ನಿಂದ ಹಣವನ್ನು ಡ್ರಾ ಮಾಡಿದ್ದರು.
ವಿನೋದ್ರಾಜ್ ಇಂಡಸ್ಲ್ಯಾಂಡ್ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಬಂದು ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಿದ್ದ ತಮ್ಮ ಕಾರಿನಲ್ಲಿ ಕುಳಿತ್ತಿದ್ದರು. ಇದನ್ನು ನೋಡಿದ ಕಳ್ಳರ ಗುಂಪೊಂದು ಈ ವೇಳೆ ಅಲ್ಲಿಗೆ ಬಂದ ಒಬ್ಬ ಕಳ್ಳರು, ಸರ್ ನಿಮ್ಮ ಕಾರಿನ ಟೈರ್ ಪಂಚರ್ ಆಗಿದೆ ನೋಡಿ ಎಂದು ಹೇಳಿದ್ದಾರೆ. ಚೋರರ ಮಾತನ್ನ ಕೇಳಿ ವಿನೋದ್ರಾಜ್ ಕಾರಿನ ಕಿಟಕಿಯಿಂದ ಕೆಳಗೆ ನೋಡುತ್ತಿದ್ದಂತೆ ಕಳ್ಳರು ಕಾರಿನಲ್ಲಿದ್ದ ಒಂದು ಲಕ್ಷ ರೂ. ಇದ್ದ ಹಣದ ಬ್ಯಾಗ್ ಎಗರಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
