ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫುಲ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಿಡುಗಡೆಯಾಗಿ ಅದ್ಬುತ ಪ್ರದರ್ಶನ ಕಾಣುತ್ತಿರುವ ಯಜಮಾನ ಸಿನಿಮಾ 5ನೇ ವಾರಕ್ಕೆ ಕಾಲಿಟ್ಟಿದೆ. ಎಲೆಕ್ಷನ್ ಬಿಸಿಯ ನಡೆವೆಯೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಸಿನಿಮಾ ‘ಒಡೆಯ’ ಚಿತ್ರದ ಶೂಟಿಂಗ್ ಅನ್ನು ಮುಗಿಸಿಕೊಟ್ಟಿದ್ದಾರೆ.
‘ಒಡೆಯ’ನಿಗೆ ಸದ್ದಿಲ್ಲದೆ ಚಿತ್ರೀಕರಣ ಮುಕ್ತಾಯಗೊಂಡಿದೆ. ಕೇವಲ ಎರಡು ಹಾಡು ಮಾತ್ರ ಬಾಕಿ ಇದೆ. ಅದು ಕೂಡ ಇಷ್ಟೊತ್ತಿಗೆ ಮುಗಿಯುತ್ತಿತ್ತು. ಆದರೆ, ಈ ಎರಡು ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಣ ಮಾಡುವ ಪ್ಲಾನ್ ಚಿತ್ರತಂಡದ್ದು. ಹೀಗಾಗಿ ಹೊರ ದೇಶಕ್ಕೆ ಹೊರಡುವುದಕ್ಕೆ ಹಾಡು ಬಾಕಿ ಉಳಿಸಿಕೊಂಡಿದ್ದಾರೆ. ಬಹು ದೊಡ್ಡ ತಾರಾಗಣ, ಬಿಗ್ ಬಜೆಟ್ ಸಿನಿಮಾ ಆಗಿದ್ದರೂ ಭಾರಿ ವೇಗವಾಗಿ ಶೂಟಿಂಗ್ ಮುಕ್ತಾಯಗೊಂಡಿದೆ.
‘ಒಡೆಯ’ ಚಿತ್ರವು ಸಹೋದರರ ಕಥಾವಸ್ತುವನ್ನು ಒಳಗೊಂಡಿದ್ದು ನಾಯಕ ದರ್ಶನ್’ಗೆ ಚಿತ್ರದಲ್ಲಿ ನಾಲ್ವರು ತಮ್ಮಂದಿರುವ ಇರಲಿದ್ದಾರೆ.ಈಗ ಆ ಪಾತ್ರಗಳಿಗೆ ಕಲಾವಿದರ ಆಯ್ಕೆ ಅಂತಿಮವಾಗಿದ್ದು ಯಶಸ್, ಪಂಕಜ್ ನಾರಾಯಣ್, ನಿರಂಜನ್ ಹಾಗೂ ಸಮರ್ಥ್ ದರ್ಶನ್ ತಮ್ಮಂದಿರಾಗಿ ಕಾಣಿಸಿಕೊಳ್ಳಲಿದ್ದಾರೆ.
ಉಳಿದಂತೆ ದೇವರಾಜ್, ರವಿಶಂಕರ್, ಸಾಧುಕೋಕಿಲ, ಚಿಕ್ಕಣ್ಣ, ಚಿತ್ರಾಶೆಣೈ, ಶರತ್ ಲೋಹಿತಾಶ್ವ, ಅವಿನಾಶ್, ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ. ಇನ್ನು ‘ಒಡೆಯ’ ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡುತ್ತಿದ್ದು ಇನ್ನು ‘ಒಡೆಯ’ ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಈ ಸಿನಿಮಾ ತಮಿಳು ಸೂಪರ್ ಹಿಟ್ ಆಗಿದ್ದ ‘ವೀರಂ’ ಚಿತ್ರದ ಅಫೀಶಿಯಲ್ ರಿಮೇಕ್. ತಮಿಳಿನಲ್ಲಿ ಅಜಿತ್ ನಟಿಸಿದ್ದ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದು ತಮ್ಮನ್ನಾಳ ಪಾತ್ರವನ್ನು ಕೊಡಗಿನ ಹುಡುಗಿ ರಾಘವಿ ಮಾಡುತ್ತಿದ್ದಾರೆ.. ಅಂದಹಾಗೆ ಇದಕ್ಕೂ ಮುಂಚೆ ವೀರಂ ಚಿತ್ರವನ್ನು ತೆಲುಗಿನ ಪವನ್ ಕಲ್ಯಾಣ್ ‘ಕಾಟಮರಾಯುಡು’ ಎಂಬ ಹೆಸರಿನಲ್ಲಿ ರಿಮೇಕ್ ಮಾಡಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
