ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ವಿಶ್ವಕಪ್ ನಿಂದ ಹೊರ ಉಳಿದಿದ್ದ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಿಶ್ವಕಪ್ ನಿಂದಲೇ ಔಟ್ ಆಗಿದ್ದಾರೆ. ಇನ್ನೂ ಗುಣಮುಖರಾದ ಕಾರಣ ಟೂರ್ನಿಯಿಂದಲೇ ಧವನ್ರನ್ನು ಕೈಬಿಡಲಾಗಿದ್ದು, ಅವರ ಬದಲಿಗೆ ರಿಷಭ್ ಪಂತ್ಗೆ ಸ್ಥಾನವನ್ನು ನೀಡಲಾಗಿದೆ ಎಂದು ಬುಧವಾರ ಬಿಸಿಸಿಐ ತಿಳಿಸಿದೆ.
I feel emotional to announce that I will no longer be a part of #CWC19. Unfortunately, the thumb won’t recover on time. But the show must go on.. I’m grateful for all the love & support from my team mates, cricket lovers & our entire nation. Jai Hind!🙏 🇮🇳 pic.twitter.com/zx8Ihm3051
— Shikhar Dhawan (@SDhawan25) June 19, 2019
Dear @SDhawan25, no doubt the pitch will miss you but I hope you recover at the earliest so that you can once again be back on the field and contribute to more wins for the nation. https://t.co/SNFccgeXAo
— Narendra Modi (@narendramodi) June 20, 2019
ವಿಶ್ವಕಪ್ ನಿಂದ ಹೊರ ನಡೆಯುತ್ತಿದ್ದಂತೆ ಶಿಖರ್ ಧವನ್ ತಮ್ಮ ಅಧಿಕೃತ್ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಾಕಿದ್ದಾರೆ. ವಿಡಿಯೋದಲ್ಲಿ ಅವರು ತಮ್ಮ ಭಾವನೆಗಳನ್ನು ವ್ಯಕ್ತ ಪಡಿಸಿದ್ದಾರೆ. ‘ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ನಾನು ಕಣಕ್ಕೆ ಇಳಿಯುವುದಿಲ್ಲ. ಎಡಗೈ ಹೆಬ್ಬೆರಳಿಗೆ ಗಾಯ, ಸರಿಯಾದ ಸಮಯದಲ್ಲಿ ಚೇತರಿಸಿಕೊಳ್ಳಲಿಲ್ಲ. ನಾನು ನಿಜಕ್ಕೂ ತಂಡದ ಸಹ ಆಟಗಾರರು ಹಾಗೂ ಅಭಿಮಾನಿಗಳ ಪ್ರೀತಿಗೆ ಮನಸೋತಿದ್ದೇನೆ’ ಎಂದಿದ್ದಾರೆ.
ಧವನ್ ಅವರು ತಂಡದಿಂದ ಹೊರಗುಳಿಯುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಮೂಲಕ ಶಿಖರ್ ಧವನ್ ಗೆ ವಿಶೇಷ ಸಂದೇಶ ನೀಡಿದ್ದಾರೆ. ಪ್ರೀತಿಯ ಶಿಖರ್ ಧವನ್ , ಅನುಮಾನವೇ ಇಲ್ಲ. ಮೈದಾನ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದೆ. ಆದರೆ, ನೀವು ಬೇಗ ಚೇತರಿಸಿಕೊಳ್ಳುತ್ತೀರಾ ಎಂಬ ನಂಬಿಕೆಯಿದೆ. ನೀವು ಮತ್ತೆ ಮೈದಾನಕ್ಕೆ ಮರಳಿ ದೇಶ ಹೆಚ್ಚಿನ ಪಂದ್ಯ ಗೆಲಲ್ಲು ಕೊಡುಗೆ ನೀಡಿ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
