fbpx
ಸಮಾಚಾರ

”ನನ್ನ ಕ್ಷಮಿಸಿ, ಎಲ್ಲರಿಗೂ ಒಳ್ಳೆಯದಾಗಲಿ” ಡೆತ್ ನೋಟ್ ಬರೆದಿಟ್ಟು ಸ್ಯಾಂಡಲ್‌ವುಡ್ ನಿರ್ಮಾಪಕ ನೇಣಿಗೆ ಶರಣು

ಚಿತ್ರ ನಿರ್ಮಾಪಕರೊಬ್ಬರು ತನ್ನ ಮನೆಯ ಹೊರಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಮೃತನನ್ನು ಕುಂದಾಪುರದ ಬೀಜಾಡಿ ನಿವಾಸಿ ನಾಗೇಶ್ ಕುಮಾರ್ (64) ಎಂದು ಗುರುತಿಸಲಾಗಿದೆ.

ಮೃತ ನಾಗೇಶ್ ಕುಮಾರ್ ಚಲನಚಿತ್ರ ನಿರ್ದೇಶನಕ್ಕೆ 28 ಲಕ್ಷ ಹಣ ಹೂಡಿದ್ದರು. ‘ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ನನ್ನ ಸಾವಿಗೆ ಯಾರೂ ಕಾರಣರಲ್ಲ’
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ನಾಗೇಶ್ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಜೊತೆಗೆ, ನನ್ನನ್ನ ಕ್ಷಮಿಸಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಸಹ ಉಲ್ಲೇಖಿಸಿದ್ದಾರೆ.

ಬೀಜಾಡಿ ಗ್ರಾಮದ ಲಕ್ಷ್ಮೀ ಗ್ಲಾಸ್ ಫ್ಲೈವುಡ್ ಅಂಗಡಿ ಹೊರಗಡೆ ನಾಗೇಶ್ ನೇಣು ಹಾಕಿಕೊಂಡಿದ್ದಾರೆ. ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಲಾಗುವುದು ಎಂದು ಕುಂದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top