ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಬಂಧಿಸಿದಂತೆ ಮಹತ್ವ ತಿರ್ಫು ನೀಡಿದ್ದು ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದೆನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲ 32 ಆರೋಪಿಗಳನ್ನ ಖುಲಾಸೆಗೊಳಿಸಿದೆ.
ಕರಸೇವಕರ ಮೇಲೆ ಪೊಲೀಸ್ ತಂಡ
ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು.
ರಾಜಕೀಯ ನಾಯಕರನ್ನು ಬಂಧಿಸಿದಾಗ ಕಾನೂನಿನ ನಿಯಮ ಎಲ್ಲಿತ್ತು?ಕ್ಷಮಿಸಿ ಆದರೆ ಮರೆಯಬೇಡಿ #BabriDemolitionCase #BabriMasjidDemolition
— Pranitha Subhash (@pranitasubhash) October 1, 2020
ಈಗ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಂದ ನಂತರ ಟ್ವೀಟ್ ಮಾಡಿರುವ ನಟಿ ಪ್ರಣಿತಾ ಸುಭಾಷ್ ಅವರು, ರಾಜಕೀಯ ನಾಯಕರನ್ನು ಬಂಧಿಸಿದಾಗ ಕಾನೂನಿನ ನಿಯಮ ಎಲ್ಲಿತ್ತು? ಪೊಲೀಸ್ ತಂಡ ಕರಸೇವಕರ ಮೇಲೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು. ಕ್ಷಮಿಸಿ ಆದರೆ ಮರೆಯಬೇಡಿ ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ಬಾಬ್ರಿ ಮಸೀದಿ ಧ್ವಂಸ ಎಂಬ ಹ್ಯಾಷ್ಟ್ಯಾಗ್ ಬಳಸಿದ್ದಾರೆ.
Where was the rule of law when political leaders were arrested? Where was justice when karsevaks were fired at by the police squads? Forgive, don't forget.#BabriMasjidDemolition #BabriMasjidDemolitionCase
— Pranitha Subhash (@pranitasubhash) September 30, 2020
ಪ್ರಣೀತಾ ಅವರು ಕೆಲವೇ ಗಂಟೆಗಳ ಹಿಂದೆಯಷ್ಟೆ ಈ ಟ್ವೀಟ್ ಮಾಡಿದ್ದು, ಇದರ ಪರ-ವಿರೋಧದ ಚರ್ಚೆ ಈಗಾಗಲೇ ಆರಂಭವಾಗಿದೆ. ಕೆಲವರು ಪ್ರಣೀತಾ ಅವರ ಅಭಿಪ್ರಾಯವನ್ನು ಟೀಕಿಸುತ್ತಿದ್ದರೆ, ಮತ್ತೆ ಕೆಲವರು ಬೆಂಬಲಿಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
