ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಜಾಲದ ನಂಟು ಬಲವಾಗಿಯೇ ಸುತ್ತಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.ಇದಕ್ಕೆ ಪೂಕರವೆಂಬಂತೆ ಅನುಶ್ರೀ ಮೊಬೈನಲ್ಲಿ ಸ್ಫೋಟಕ ಸೀಕ್ರೆಟ್ ಸಿಕ್ಕಿದ್ದು ಪ್ರಕರಣಕ್ಕೆ ರೋಚಕ ಟ್ವಿಸ್ಟ್ ದೊರಕುತ್ತಿದೆ.
ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅನುಶ್ರೀ ಅವರ ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜ್ಯದ ಪ್ರಭಾವಿ ನಾಯಕರಿಗೆ ಕರೆ ಮಾಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ಮೊಬೈಲ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಅನುಶ್ರೀ ಅವರಿಗೆ ನೋಟಿಸ್ ಬಂದ ದಿನ ಮತ್ತು ಮಾರನೇ ದಿನ ರಾಜ್ಯದ ಮೂವರು ಪ್ರಭಾವಿಗಳಿಗೆ ಕರೆ ಮಾಡಿದ್ದಾರೆ. ಮೂವರು ಪ್ರಭಾವಿಗಳಿಗೆ ಕರೆ ಮಾಡಿ ಹೆಚ್ಚು ಸಮಯ ಮಾತನಾಡಿದ್ದಾರೆ, ಪ್ರಕರಣದಿಂದ ಬಚಾವ್ ಆಗಲು ಮೂವರು ಪ್ರಭಾವಿ ಅನುಶ್ರೀ ಕಾಲ್ ಮಾಡಿದ್ದು, ಸಿಸಿಬಿ ತನಿಖೆಯಲ್ಲಿ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ.
ಕರಾವಳಿಯ ಬಿಜೆಪಿ ನಾಯಕ, ಬೆಂಗಳೂರು ಭಾಗದ ಕಾಂಗ್ರೆಸ್ ಮುಖಂಡ ಹಾಗೂ ಜೆಡಿಎಸ್ ಪ್ರಭಾವಿಯೊಬ್ಬರೊಂದಿಗೆ ಚರ್ಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
