ನಿಷೇಧ ಹೇರಿದ್ದರೂ ನಿಯಮ ಮೀರಿ ಬಂಡೀಪುರದಲ್ಲಿ ನಟ ಧನ್ವೀರ್ ರಾತ್ರಿ ಸಫಾರಿ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು. ನಟ ಧನ್ವೀರ್ ರಾತ್ರಿ ವೇಳೆ ಸಫಾರಿ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಆದರೆ ಬಡೀಪುರದ ಯಾವ ಜಾಗದಲ್ಲಿ ಈ ಸಫಾರಿ ಮಾಡಲಾಗಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ.
ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.ತಮ್ಮ ವಾಹನದ ಬಳಿ ಹುಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಸೆರೆಹಿಡಿದಿರುವ ಧನ್ವಿರ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಭಯಾರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಸಂಚಾರ ಮಾತ್ರವಲ್ಲ, ಚಲಿಸುವ ವಾಹನಗಳು ರಾತ್ರಿ ಸಮಯದಲ್ಲಿ ಅಲ್ಲಿ ನಿಲ್ಲಿಸುವಂತಿಲ್ಲ. ವಾಹನ ನಿಲ್ಲಿಸಿದಲ್ಲಿ ದಂಡ ತೆರಬೇಕಾಗುತ್ತದೆ.
ಪ್ರಾಣಿಗಳಿಗೆ ತೊಂದರೆಯಾಗಬಾರದು ಎಂದು ಸಫಾರಿಗೆ ಸಮಯ ನಿಗದಿ ಮಾಡಲಾಗಿದೆ. ಆದರೆ ಸೆಲೆಬ್ರಿಟಿಗಳಾದರೆ ಇಷ್ಟ ಬಂದಂತೆ ರಾತ್ರಿ ವೇಳೆ ಸಫಾರಿ ಮಾಡಿದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡಿ ನಂತರ ಎಡಿಟ್ ಮಾಡಿ ಮತ್ತೆ ಪೋಸ್ಟ್ ಮಾಡಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
