ಹಠಾತ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರ ಆರೋಗ್ಯ ಇದೀಗ ಸ್ಥಿರವಾಗಿದೆ . ಸದಾನಂದಗೌಡರೇ ಟ್ವೀಟ್ ಮಾಡಿದ್ದು ತಮ್ಮ ಆರೋಗ್ಯ ಸ್ಥಿತಿಯನ್ನು ಹೇಳಿ ಕೊಂಡಿದ್ದಾರೆ.
ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. pic.twitter.com/7nJVdwY7K3
— Sadananda Gowda (@DVSadanandGowda) January 3, 2021
‘ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮವಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಸಚಿವ ಸದಾನಂದ ಗೌಡ ಅವ್ರು ಟ್ವೀಟ್ ಮಾಡಿದ್ದಾರೆ.
ನೆನ್ನೆ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಹಿಂದಿರುಗುವಾಗ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರು ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾಗಿದ್ದರು. ಬಳಿಕ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಹಾಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
