ಕನ್ನಡ ಚಿತ್ರಗಳ ಬಿಡುಗಡೆಗೆ ಟಾಲಿವುಡ್ ನಲ್ಲಿ ಅಡ್ಡಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ತೆಲುಗು ಚಿತ್ರರಂಗದ ಹೊಸ ನೀತಿಯಿಂದ ಕನ್ನಡ ಸಿನಿಮಾಗಳಿಗೆ ಸಂಕಷ್ಟ ಎದುರಾಗಲಿದೆ. ಹಾಗಾಗಿ, ದರ್ಶನ್ ಟಾಲಿವುಡ್ ವಿರುದ್ಧ ಇಂದು ನೀಡಲಿದ್ದಾರೆ.
ದರ್ಶನ್ ಅಭಿನಯದ ‘ರಾಬರ್ಟ್’ ಬಿಡುಗಡೆಗೆ ತೆಲುಗು ಚಿತ್ರರಂಗ ಕಿರಿಕ್ ತೆಗೆದಿದೆ. ಮಾರ್ಚ್ 11 ಕ್ಕೆ ಸಿನಿಮಾ ಬಿಡುಗಡೆಗೆ ಟಾಲಿವುಟ್ ಒಪ್ಪುತ್ತಿಲ್ಲ. ಮಾರ್ಚ್ 11 ರಂದು ಕನ್ನಡ ಹಾಗೂ ತೆಲುಗಿನಲ್ಲಿ ರಾಬರ್ಟ್ ಬಿಡುಗಡೆಗೆ ಚಿತ್ರತಂಡ ಸಜ್ಜಾಗಿತ್ತು. ಆದರೆ ಅಂದು ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ತೆಲುಗಿನಲ್ಲಿ ಬಿಡುಗಡೆ ಮಾಡಲು ಒಪ್ಪುತ್ತಿಲ್ಲ. ಈ ಸಂಬಂಧ ಫಿಲ್ಮ್ ಚೇಂಬರ್ಗೆ ದೂರು ಎಂಬ ಮಾತು ಕೇಳಿಬಂದಿದೆ.
ಕೊರೊನಾ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿ ಹೊಸ ರೂಲ್ಸ್ ಜಾರಿ ಮಾಡಿಕೊಂಡಿದೆ. ಅದರ ಅನ್ವಯ ತೆಲುಗು ಸಿನಿಮಾ ಬಿಡುಗಡೆಯ ದಿನ ಬೇರೆ ಯಾವುದೇ ಪರಿಭಾಷೆಯ ಚಿತ್ರಗಳು ತಮ್ಮ ನಾಡಿನಲ್ಲಿ ಬಿಡುಗಡೆ ಮಾಡುವಂತಿಲ್ಲ ಅನ್ನೋ ನಿಯಮ ತೆಲುಗು ಸಿನಿಮಾ ಇಂಡಸ್ಟ್ರಿ ರೂಢಿಸಿಕೊಂಡಿದೆ. ಹೀಗಾಗಿ ಆಂಧ್ರ ತೆಲಂಗಾಣದಲ್ಲಿ ಮಾರ್ಚ್ 11 ಕ್ಕೆ ತೆಲುಗು ಸಿನಿಮಾ ರಿಲೀಸ್ ಇರುವ ಕಾರಣ ಕನ್ನಡದ ‘ರಾಬರ್ಟ್’ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಇದನ್ನ ಪ್ರಶ್ನಿಸಿ ದರ್ಶನ್ ಹಾಗೂ ರಾಬರ್ಟ್ ಟೀಮ್ ಇಂದು ಕನ್ನಡ ಫಿಲ್ಮ್ ಚೇಂಬರ್ ಗೆ ದೂರು ನೀಡುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
