ದಾವಣಗೆರೆ ಎಕ್ಸ್ಪ್ರೆಸ್ ಖ್ಯಾತಿಯ ಕ್ರಿಕೆಟರ್ ‘ವಿನಯ್ ಕುಮಾರ್’ ಇಂದು ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಎರಡು ಪುಟಗಳ ಪತ್ರವನ್ನು ಬರೆದು ಅದನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುವ ಮೂಲಕ ವಿನಯ್ ಕುಮಾರ್ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.
Thankyou all for your love and support throughout my career. Today I hang up my boots. 🙏🙏❤️ #ProudIndian pic.twitter.com/ht0THqWTdP
— Vinay Kumar R (@Vinay_Kumar_R) February 26, 2021
ಈ ಕುರಿತು ಟ್ವೀಟ್ ಮಾಡಿರುವ ವಿನಯ್ ಕುಮಾರ್, ಕಳೆದ 25 ವರ್ಷಗಳಲ್ಲಿ ಅನೇಕ ಸ್ಟೇಷನ್ಗಳನ್ನು ಹಾದು ಹೋಗಿರುವ ದಾವಣಗೆರೆ ಎಕ್ಸ್ಪ್ರೆಸ್, ಕೊನೆಗೂ ನಿವೃತ್ತಿ ಎಂಬ ಸ್ಟೇಷನ್ಗೆ ತಲುಪಿದೆ. ಮಿಶ್ರ ಭಾವನೆಗಳೊಂದಿಗೆ ಈ ಮುಖಾಂತರ ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದೊಂದು ಸುಲಭವಾದ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಂತೆ ನನ್ನ ಜೀವನದಲ್ಲೂ ಆ ದಿನ ಬಂದಿದೆ ಎಂದು ಭಾವುಕ ಸಂದೇಶದಲ್ಲಿ ತಿಳಿಸಿದರು.
ಭಾರತ ಶ್ರೇಷ್ಠ ಆಟಗಾರರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಎಂ.ಎಸ್. ಧೋನಿ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ರೋಹಿತ್ ಶರ್ಮಾ ಅವರ ಆಡಿರುವುದಕ್ಕೆ ಖುಷಿದೆ ಇದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಚಿನ್ ತೆಂಡೂಲ್ಕರ್ ನನ್ನ ಮೆಂಟರ್ ಆಗಿರುವುದು ಖುಷಿಯ ವಿಚಾರ ಎಂದರು.
ನಾನು ನನ್ನ ಕನಸನ್ನು ನನಸಾಗಿಸಿಕೊಳ್ಳಲು ದಾವಣಗೆರೆಯಿಂದ ಬೆಂಗಳೂರಿಗೆ ಬಂದೆ. ರಾಜ್ಯ ತಂಡವನ್ನು ಪ್ರತಿನಿಧಿಸಲು ನನಗೆ ಅವಕಾಶ ನೀಡಿದ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಗೆ ಕೃತಜ್ಞನಾಗಿದ್ದೇನೆ. ಅಲ್ಲಿಂದ ನಾನು ಭಾರತ ಪರ ಆಡಲು ಹೋದೆ ಮತ್ತು ಕ್ರಿಕೆಟ್ನ ಎಲ್ಲಾ ಸ್ವರೂಪಗಳಲ್ಲಿ ದೇಶವನ್ನು ಪ್ರತಿನಿಧಿಸಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ ವಿನಯ್ ಕುಮಾರ್.
2010ರಲ್ಲಿ ಭಾರತದ ರಾಷ್ಟ್ರೀಯ ತಂಡಕ್ಕೆ ಪಾದಾಪರ್ಣೆ ಮಾಡಿದ್ದ ವಿನಯ್ ಕುಮಾರ್ ಭಾರತದ ಪರ ಒಟ್ಟು 31 ODIಪಂದ್ಯಗಳನ್ನು ಆಡಿದ್ದು, 31 ವಿಕೆಟ್ ಕಬಳಿಸಿದ್ದಾರೆ. ಇನ್ನೂ ಆಸ್ಟ್ರೇಲಿಯಾ ವಿರುದ್ಧ 2012ರಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿರುವ ವಿನಯ್ ಕುಮಾರ್ 1 ವಿಕೆಟ್ ಕಬಳಿಸುವಲ್ಲಿ ಮಾತ್ರ ಸಫಲರಾಗಿದ್ದಾರೆ. ಇನ್ನು 9 ಟಿ-20 ಪಂದ್ಯಗಳನ್ನು ಆಡಿದ್ದು, 10 ವಿಕೆಟ್ ಕಬಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
