ಇಷ್ಟು ದಿನ ಜೂನಿಯರ್ ಚಿರು ಆಗಿದ್ದ ಸರ್ಜಾ ಕುಟುಂಬದ ಕುಡಿಗೆ ಇಂದು ಅಧಿಕೃತ ಹೆಸರು ಸಿಕ್ಕಿದೆ. ಚಿರಂಜೀವಿ ಸರ್ಜಾ ಹಾಗೂ ಮೇಘನಾರಾಜ್ ಅವರ ಇಂದು ನಾಮಕರಣ ಮಾಡಲಾಗಿದ್ದು, ರಾಯನ್ ರಾಜ್ ಸರ್ಜಾ ಎಂದು ಹೆಸರಿಡಲಾಗಿದೆ.
ನಾಮಕರಣದ ಬಳಿಕ ಸರ್ಜಾ ಕುಟುಂಬ ಮತ್ತು ಸುಂದರರಾಜ ಕುಟುಂಬ ಸುದ್ದಿಗೋಷ್ಠಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮೇಘನಾ ರಾಜ್ ಪ್ರಮೀಳಾ ಜೋಷಾಯ್ ಸುಂದರ ದೃವಸರ್ಜಾ ಮಾತನಾಡಿದರು. ಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧ್ರುವ ಸರ್ಜಾ, ನಮ್ಮ ಅಣ್ಣನ ಮಗನ ಹೆಸರು ರಾಯನ್ ರಾಜ್ ಸರ್ಜಾ. ಆ ಒಂದು ಹೆಸರಿನಲ್ಲಿಯೇ ಸುಂದರ್ ರಾಜ್ ಅವರ ಫ್ಯಾಮಿಲಿ ಹಾಗೂ ಸರ್ಜಾ ಕುಟುಂಬ ಯಾವಾಗಲೂ ಒಂದಾಗಿಯೇ ಇರುತ್ತದೆ. ಕೆಲವು ಯೂಟ್ಯೂಬ್ ಅಥವಾ ಬೇರೆ ಯಾವುದಾದರ ಮೂಲಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದರೆ ದಯವಿಟ್ಟು ಮಾಡಬೇಡಿ. ನಾವು ಯಾವತ್ತಿಗೂ ಭಿನ್ನಾಭಿಪ್ರಾಯಗಳನ್ನು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ನಂತರ ಈ ಸಮಯದಲ್ಲಿ ನಾನು ನನ್ನ ಚಿಕ್ಕಪ್ಪ, ನನ್ನ ಅಣ್ಣನನ್ನು ನೆನಪಿಸಿಕೊಳ್ಳಲಿ ಇಚ್ಛಿಸುತ್ತೇನೆ. ಸುಂದರ್ ರಾಜ್, ಪ್ರಮೀಳಾ ಜೋಷಾಯ್ ಅವರು ಹಾಗೂ ನನ್ನ ಅತ್ತಿಗೆ ಎಲ್ಲರೂ ಸಂತಸದಿಂದ ಇದ್ದಾರೆ. ನಾನು ಕೂಡ ಖುಷಿಯಾಗಿದ್ದೇನೆ. ರಾಯನ್ಗೆ ಎಲ್ಲರೂ ಆಶೀರ್ವಾದಮಾಡಿ. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ. ಅವನು ಯುವರಾಜ ಎಂದು ಹೆಸರಿಟ್ಟಿರುವುದಲ್ಲ. ಅವನು ಯುವರಾಜನಂತೆಯೇ ಇರುತ್ತಾನೆ ಎಂದು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
