fbpx
ಸಮಾಚಾರ

#RCBvsKKR ಎಲಿಮಿನೇಟರ್ ಕದನ: ಪಂದ್ಯ ಆರಂಭಕ್ಕೂ ಮುನ್ನವೇ RCBಗೆ ದೊಡ್ಡ ಶಾಕ್: ಇಬ್ಬರು ಸ್ಟಾರ್ ಆಟಗಾರರು ಟೂರ್ನಿಯಿಂದ ಔಟ್

ಹದಿನಾಲ್ಕನೇ ಇಂಡಿಯನ್ ಪ್ರೀಮಿಯರ್‌ ಲೀಗ್ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಸೋಮವಾರ (ಅ.11) ಕಾದಾಟ ನಡೆಸಲಿವೆ. ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡದ ಜೊತೆ ಎಲಿಮಿನೇಟರ್ ಪಂದ್ಯವನ್ನಾಡಲಿದೆ.

ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಆರ್​ಸಿಬಿಗೆ ಇದು ಮಹತ್ವದ್ದಾಗಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಬೆಂಗಳೂರು ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಇಬ್ಬರು ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ.

ಹೌದು, ಪ್ರಮುಖ ಹಂತದಲ್ಲೇ ಆರ್​ಸಿಬಿಗೆ ಸಂಕಷ್ಟ ಉಂಟಾಗಿದೆ. ತಂಡದ ಪ್ರಮುಖ ಶ್ರೀಲಂಕಾ ಆಟಗಾರರಾದ ವಾನಿಂದು ಹಸರಂಗ ಮತ್ತು ದುಷ್ಮಾಂತ ಚಮೀರ ಐಪಿಎಲ್​ನಿಂದ ಹೊರ ನಡೆಯುವ ಸಂದರ್ಭ ಉಂಟಾಗಿದೆ. ಐಸಿಸಿ ಟಿ-20 ವಿಶ್ವಕಪ್ ಕ್ಯಾಂಪ್​ಗಾಗಿ ಇವರಿಬ್ಬರು ತಮ್ಮ ರಾಷ್ಟ್ರೀಯ ತಂಡ ಸೇರಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top