ಮೇಕೆದಾಟು ಯೋಜನೆ ಆರಂಭಕ್ಕೆ ಆಗ್ರಹಿಸಿ ಕೊರೋನಾ ಅಬ್ಬರದ ನಡೆವೆಯೂ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಕೊನೆಗೊಳಿಸಿದ್ದಾರೆ.
ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಲಿದೆ. ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇತರ ನಾಯಕರು ಪಾಲ್ಗೊಂಡಿದ್ದರು.
ಸದ್ಯ ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂಬುದು ನಹುತೇಕರ ಅಭಿಪ್ರಾಯವಾಗಿತ್ತು. ಅಷ್ಟೇ ಅಲ್ಲದೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಾಗೆಯೆ ನೆನ್ನೆ ತಾನೇ ಪಾದಯಾತ್ರೆ ಕೈಬಿಡುವಂತೆ ಹೈಕೋರ್ಟ್ ಮತ್ತು ಸರ್ಕಾರ ಆದೇಶ ನೀಡಿತ್ತು ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಮನವಿ ಪತ್ರದ ಮೂಲಕ ರಿಕ್ವೆಸ್ಟ್ ಮಾಡಿಕೊಂಡಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ಕಾಗ್ರೇಸ್ ನಾಯಕರು ಪಾದಯಾತ್ರೆಯನ್ನು ಸದ್ಯಕ್ಕೆ ಮುಂದೂಡುವ ನಿರ್ಧಾರಕ್ಕೆ ಬಂದಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
