ಕೆಂಡಸಂಪಿಗೆ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟ ‘ಮಾನ್ವಿತಾ ಹರೀಶ್’ ಟಗರು ಸಿನಿಮಾದ ಮೂಲಕ ಸಕತ್ ಫೇಮಸ್ ಆದರು. ಇವರಿಗೆ ಸಿನಿಮಾವಲ್ಲದೆ ವಿದ್ಯಾಭ್ಯಾಸದಲ್ಲೂ ಹೆಚ್ಚಿನ ಆಸಕ್ತಿ ಇತ್ತು. ಹೀಗಾಗಿ ತಮ್ಮ ಬಿಡುವಿನ ಸಮಯದಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಿದ್ದು, ಇದೀಗ ಸ್ನಾತಕೋತ್ತರ ಪದವೀಧರರಾಗಿದ್ದಾರೆ.
ತಮ್ಮ ವಿದ್ಯಾಭಾಸವನ್ನು ಮುಂದುವರಿಸಲು ಕೋವಿಡ್ ಸಹಾಯ ಮಾಡಿದೆ ಎಂದು ಹೇಳಬಹುದು. ಕೋವಿಡ್ ಸಮಯದಲ್ಲಿ ಸಿನಿಮಾ ರಂಗದಿಂದ ಬ್ರೇಕ್ ಪಡೆದಿದ್ದ ಮಾನ್ವಿತಾ ಏನು ಮಾಡುತ್ತಿದ್ದರು ಎಂದು ಯಾರಿಗೂ ತಿಳಿದಿರಲಿಲ್ಲ. ಆದರೆ ಇದೀಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ಕುರಿತು ಅಧಿಕೃತವಾಗಿ ತಿಳಿಸಿದ ಮಾನ್ವಿತಾ ತಾವು ಬಿಡುವಿನ ಸಮಯದಲ್ಲಿ ಮಾಸ್ ಕಮ್ಯೂನಿಕೇಷನ್ ಮಾಧ್ಯಮದ ಕುರಿತು ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ತಿಳಿಸಿದ್ದಾರೆ.
Finally!!!! Post-graduated in media studies from @jaincollege 💃💃 pic.twitter.com/2OyPGNJPV3
— Manvita Kamath (@manvitakamath) May 12, 2022
ಸಿನಿಮಾ ಜೊತೆ ಓದಿನಲ್ಲೂ ಹೆಚ್ಚಿನ ಒಲವಿದ್ದ ಕಾರಣ ಬೆಂಗಳೂರಿನ ಜೈನ್ ಯೂನಿವರ್ಸಿಟಿನಲ್ಲಿ ಮಾಧ್ಯಮ ಕುರಿತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. ಎರಡು ವರ್ಷಗಳ ಶ್ರಮ ಮತ್ತು ತಾಳ್ಮೆ ತಮಗೆ ಸಿಕ್ಕಿರೋ ಪದವಿ ಕುರಿತು ತಾನೆಷ್ಟು ಖುಷಿಯಾಗಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟಗರು ನಟಿ ಹೇಳಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
