fbpx
ಸಮಾಚಾರ

“ಹಿಂದಿ ರಾಷ್ಟ್ರ ಭಾಷೆ ಅದನ್ನು ಎಲ್ಲರೂ ಗೌರವಿಸಬೇಕು” ಕ್ಯಾತೆ ತೆಗೆದ ಅರ್ಜುನ್ ರಾಂಪಾಲ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಹಿಂದಿ ಭಾಷೆ ಕುರಿತು ಚರ್ಚೆ ದೊಡ್ಡ ಮಟ್ಟದಲ್ಲಿ ನಡೆದಿತ್ತು. ಹಿಂದಿನೇ ರಾಷ್ಟ್ರ ಭಾಷೆ ಎಂದು ಹೇಳಿದ್ದ ಅಜಯ್‌ಗೆ ಸುದೀಪ್ ಪ್ರೀತಿಯಿಂದ ಬುದ್ಧಿ ಹೇಳಿದ್ದರು. ಆನಂತರ ಅಜಯ್ ಕೂಡ ಕ್ಷಮೆ ಕೇಳಿದ್ದರು. ಸಿನಿಮಾ ಸೆಲೆಬ್ರಿಟಿಗಳು ಮಾತ್ರವಲ್ಲ ರಾಜಕಾರಣಿಗಳು ಮತ್ತು ಜನ ಸಾಮಾನ್ಯರು ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದರು. ಎಲ್ಲವೂ ತಣ್ಣಗಾಯ್ತು ಅಂದುಕೊಳ್ಳುತ್ತಿದ್ದಂತೆ ಅರ್ಜುನ್ ರಾಮ್‌ಪಾಲ್ ಕ್ಯಾತೆ ತೆಗೆದಿದ್ದಾರೆ.

“ಭಾರತವು ಹಲವು ಭಾಷೆ, ಸಂಸ್ಕೃತಿ, ಸಂಪ್ರದಾಯ, ಹಬ್ಬ, ಧರ್ಮಗಳಿಂದ ಕೂಡಿದ ರಾಷ್ಟ್ರವಾಗಿದೆ. ನಾವೆಲ್ಲರೂ ಇಲ್ಲಿ ಶಾಂತಿಯಿಂದ, ಒಟ್ಟಾಗಿ ವಾಸ ಮಾಡುತ್ತೇವೆ. ಆದರೆ ಭಾಷೆ ಇಲ್ಲಿ ಲೆಕ್ಕಕ್ಕೆ ಬರೋದಿಲ್ಲ. ಆದರೆ ಇಲ್ಲಿ ಹೆಚ್ಚು ಲೆಕ್ಕಕ್ಕೆ ಬರೋದು ಭಾವನೆ. ಹಿಂದಿ ರಾಷ್ಟ್ರ ಭಾಷೆಯಾಗಿದ್ದು, ಅದನ್ನು ನಾವು ಗೌರವಿಸಬೇಕು. ನಮ್ಮಲ್ಲಿ ಹಿಂದಿಯನ್ನು ಹೆಚ್ಚು ಮಾತನಾಡುತ್ತಾರೆ, ಅರ್ಥ ಮಾಡಿಕೊಳ್ಳುತ್ತಾರೆ” ಎಂದು ನಟ ಅರ್ಜುನ್ ರಾಮ್‌ಪಾಲ್ ಹೇಳಿದ್ದಾರೆ.

“ಆದರೆ ಹಿಂದಿ ಬೇರೆ ಭಾಷೆಯಿಂದ ದೂರ ಆಗೋದಿಲ್ಲ. ನಾವು ವೈವಿಧ್ಯಮಯ ರಾಷ್ಟ್ರದಲ್ಲಿ ವಾಸಿಸುತ್ತಿರುವುದರಿಂದ, ಪ್ರತಿಯೊಬ್ಬರ ವಿಭಿನ್ನ ಸಂಸ್ಕೃತಿಗಳನ್ನು ಅಳವಡಿಸಿಕೊಳ್ಳುವುದು ಉತ್ತಮ. ತಮಿಳು, ತೆಲುಗು ಸ್ವಲ್ಪ ಕಲಿಯಿರಿ. ನಾನು ಓದಲು ತಮಿಳುನಾಡಿಗೆ ಹೋಗಿದ್ದೆ, ಹಾಗಾಗಿ ಸುಲಭವಾಗಿ ತಮಿಳು ಕಲಿತೆ. ಪಂಜಾಬ್‌ಗೆ ಶೂಟಿಂಗ್‌ಗೆ ಹೋದಾಗ ನಾನು ಪಂಜಾಬಿ ಭಾಷೆ ಕಲಿತೆ. ಗುಜರಾತಿಗೆ ಹೋದರೆ ಅಲ್ಲಿ ಗುಜರಾತಿ ಭಾಷೆ ಕಲಿಯುತ್ತೀರಿ. ನಾನು ಮಹಾರಾಷ್ಟ್ರದಲ್ಲಿ ಇರೋದರಿಂದ ಮರಾಠಿ ಕಲಿತೆ. ಈ ಎಲ್ಲ ಭಾಷೆ ಕಲಿತು ಮಾತನಾಡೋದರಿಂದ ಖುಷಿ ಸಿಗುತ್ತದೆ. ನಾವು ಅದನ್ನು ಆಚರಿಸಬೇಕು.” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top