fbpx
ಸಮಾಚಾರ

ದಲಿತ ಸ್ವಾಮೀಜಿ ಬಾಯಿಯಿಂದ ಎಂಜಲು ಅನ್ನವನ್ನು ತೆಗೆಸಿ ತಿಂದ ಶಾಸಕ ಜಮೀರ್: ವಿಡಿಯೋ ವೈರಲ್

ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಸ್ವಾಮೀಜಿಯೊಬ್ಬರಿಗೆ ಕೈತುತ್ತು ತಿನ್ನಿಸಿ ಬಳಿಕ ಸ್ವಾಮೀಜಿ ಬಾಯಿಯಿಂದ ಎಂಜಲು ಅನ್ನವನ್ನು ತೆಗೆಸಿ ತಮ್ಮ ಬಾಯಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಬಾಯಿಗೆ ಹಾಕಿಸಿಕೊಂಡಿದ್ದಾರೆ.

 

 

ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ್ದಾರೆ. ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ತುತ್ತು ತೆಗೆದುಕೊಂಡು ಸ್ವೀಕರಿಸಿ, ನಾವೆಲ್ಲರೂ ಮನುಷ್ಯ ಜಾತಿಗೆ ಸೇರಿದವರು. ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಹೇಳುವ ಮೂಲಕ ಸಹೋದರತ್ವದ ಸಂದೇಶ ಸಾರಿದರು.

 

 

ಬಳಿಕ ದಲಿತ ಸಮುದಾಯದ ನಾಗರಾಜ ಸ್ವಾಮೀಜಿಯನ್ನು ಕರೆಸಿ ಜಮೀರ್ ಕೈತುತ್ತು ತಿನ್ನಿಸಿದರು. ನಂತರ ಸ್ವಾಮೀಜಿ ಕೈ ತುತ್ತು ತಿನ್ನಿಸಲು ಮುಂದಾದಾಗ ಕೈ ತುತ್ತು ಬೇಡ ನಿಮ್ಮ ಬಾಯಿಯಿಂದಲೇ ಕೊಡಿ ಎಂದು ಅವರ ಬಾಯಿಯಿಂದ ಎಂಜಲು ಅನ್ನ ತಗೆಸಿ ಬಹಿರಂಗವಾಗಿ ಎಂಜಲು ಅನ್ನ ತಿಂದರು. ಈ ವೀಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ಇನ್ನು, ಈ ವೇಳೆ ಮಾತನಾಡಿದ ಅವರು, ಜಾತಿ, ಧರ್ಮಗಳಿಗೆ ಮಿಗಿಲಾದದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ ಅದುವೇ ಮನುಷ್ಯ ಜಾತಿ. ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು. ಸ್ವಾಮೀಜಿ ಬಾಯಲ್ಲಿದ್ದ ಅನ್ನ ತಿಂದ ನಾನು ಸತ್ತು ಹೋದೆನಾ ಎಂದು ಟೇಬಲ್‌ ಕುಟ್ಟಿ ಹೇಳಿರುವುದು ಈಗ ಸಖತ್‌ ವೈರಲ್‌ ಆಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top