ಕೇವಲ ಐದು ರೂಪಾಯಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿಗಳಿಸಿರುವ ಡಾಕ್ಟರ್ ಶಂಕರೇ ಗೌಡ ಅವರಿಗೆ ಹೃದಯಾಘಾತ ಸಂಭವಿಸಿದೆ. ನಿನ್ನೆ ಸೋಮವಾರ ರಾತ್ರಿ ಶಂಕರೇಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಹಾಗೆಯೇ ಆಯಾಸಗೊಂಡಿದ್ದರು.. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅದು ಲಘು ಹೃದಯಾಘಾತ ಎಂದು ತಿಳಿದುಬಂದಿದೆ
ಹೃದಯಾಘಾತಕ್ಕೊಳಗಾದ ಡಾಕ್ಟರ್ ಶಂಕರೆ ಗೌಡ ಅವರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.. ಶಂಕರೇಗೌಡ ಅವರು ಚಿಕಿತ್ಸೆಗೆ ಸಕಾರಾತ್ಮಕ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ..
ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಡ್ ಸರ್ಕ್ಯುಲೇಷನ್ ಬ್ಲಾಕ್ ಆಗಿದ್ದು ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವೆಂದು
ಶಂಕರೇಗೌಡ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
