fbpx
ಸಮಾಚಾರ

ಇಂದು ಆರ್‌ಸಿಬಿ-ಲಕ್ನೋ ಎಲಿಮಿನೇಟರ್ ಕಾಳಗ: ಮಳೆ ಅಡ್ಡಿಯಾದರೆ ಮುಂದೇನು? ಇಲ್ಲಿದೆ ಲೆಕ್ಕಾಚಾ

ಹದಿನೈದನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಕ್ವಾಲಿಫೈಯರ್‌ ಹಂತದ 2ನೇ ಸುತ್ತು ಕೊಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ಸಂಜೆ 7.30ಕ್ಕೆ ಇಂದು ನಡೆಯಲಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಆಟದಲ್ಲಿ ಗೆಲುವಿಗಾಗಿ ಸೆಣಸಾಡಲಿದೆ. ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಲಿದೆ. ಲಖನೌ ವಿರುದ್ಧ ಆರ್‌ಸಿಬಿ ಗೆದ್ದರೆ, ಎರಡನೇ ಕ್ವಾಲಿಫೈಯರ್‌ ರಾಜಸ್ಥಾನ್‌ ವಿರುದ್ಧ ಕಾದಾಟ ನಡೆಸಲಿದೆ.

ಇಂದು ನಡೆಯಲಿರುವ ಲಕ್ನೋ ಸೂಪರ್ ಜಾಯಿಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಎಲಿಮಿನೇಟರ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ವರದಿಗಳು ಮುನ್ಸೂಚನೆ ನೀಡಿದೆ..ಈಗಾಗಲೇ ಮೂರ್ನಾಲ್ಕು ದಿನಗಳಿಂದ ಕೊಲ್ಕೊತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಇನ್ನೂ ಒಂದು ವಾರಗಳ ಕಾಲ ಮಳೆ ಸುರಿಯಲಿದೆ ಎಂದು ವೆದರ್ ರಿಪೋಟ್ ಹೇಳುತ್ತಿದೆ.

ಈ ಹವಾಮಾನ ವರದಿ ಸಹಜವಾಗಿ RCB ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದೆ. ಏಕೆಂದರೆ ಒಂದು ವೇಳೆ ಮಳೆಯಿಂದ ಪಂದ್ಯ ಸಂಪೂರ್ಣ ಆಡಲು ಸ್ಯವಾಗದಿದ್ದರೆ RCB ಟೂರ್ನಿಯಿಂದಲೇ ಹೊರಬೀಳಲಿದೆ. ಲೀಗ್ ಹಣತದ ಪಾಯಿಂಟ್ಸ್ ಪಟ್ಟಿಯಲ್ಲಿ RCB ಗಿಂತಲೂ LSG ಉತ್ತಮ ಸ್ಥಾನದಲ್ಲಿ ಇರುವುದರಿಂದ LSG ಮುಂದಿನ ಹಂತಕ್ಕೆ ಎಂಟ್ರಿ ಪಡೆಯಲಿದೆ.. ಅರ್ಥಾತ್ RCB ತಂಡ ಟೂರ್ನಿಯಿಂದ ಎಲಿಮಿನೇಟ್ ಆಗಲಿದೆ.

ಸೂಪರ್ ಓವರ್:
ಒಂದು ವೇಳೆ ಯಾವುದೇ ಐಪಿಎಲ್ ಪ್ಲೇಆಫ್ ಪಂದ್ಯಗಳು ಹವಾಮಾನದಿಂದ ಅಡ್ಡಿಪಡಿಸಿದರೆ ಮತ್ತು ನಿಯಮಿತ ಸಮಯದಲ್ಲಿ ಯಾವುದೇ ಆಟವು ಸಾಧ್ಯವಾಗದಿದ್ದರೆ ಸೂಪರ್ ಓವರ್ ಆಡಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಒಂದು ವೇಳೆ ಸೂಪರ್ ಓವರ್ ಅನ್ನು ಕೂದಲು ಸಾಧ್ಯವಾಗದ ಮಟ್ಟಿಗೆ ಪರಿಸ್ಥಿತಿ ಹದಗೆಟ್ಟರೆ ಲೀಗ್ ಪಾಯಿಂಟ್ಸ್ ಪಟ್ಟಿಯಲ್ಲಿ ಎದುರಾಳಿ ತಂಡಕ್ಕಿಂತ ಮೇಲಿರುವ ತಂಡವನ್ನು ವಿಜೇತ ತಂಡವಾಗಿ ಘೋಷಿಸಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top