ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ..
ಕರ್ನಾಟಕ ರೈತ ಸಂಘಕ್ಕೆ ತನ್ನದೇ ಆದ ಐತಿಹಾಸಿಕ ಘನತೆಯಿದೆ, ಪರ-ವಿರೋಧಗಳು ಏನೇ ಇರಬಹುದು ಬೆಂಗಳೂರಿನ ಗಾಂಧಿಭವನದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ನಡೆಸಿದ ಈ ಘಟನೆ ತಲೆ ತಗ್ಗಿಸಬೇಕಾದ ವಿಚಾರ pic.twitter.com/QDzY35n44X
— GC ChandraShekhar (@GCC_MP) May 30, 2022
ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ತಮ್ಮ ಹೆಸರು ಎಳೆದು ತಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟೀಕರಣ ನೀಡುತ್ತಿದ್ದರು. ಈ ವೇಳೆ ಪತ್ರಕರ್ತರ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಗಣ್ಯರಿದ್ದ ವೇದಿಕೆಯ ಮೇಟ್ಟಿಲೇರಿ ಟಿವಿ ಮೈಕ್ ನಿಂದ ಯದುವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಜತೆಗೆ ಹಿಂಬಾಲಿಸಿದ ಗುಂಪು ರೈತ ನಾಯಕರಿಗೆ ಮಸಿ ಎರಚಿತು.
ಮೋದಿ ಮೋದಿ ಎಂದು ಘೋಷಣೆ ಕೂಗಿದರು.ಕೂಡಲೇ ಸ್ಥಳದಲ್ಲಿದ್ದ ರೈತರು ಹಲ್ಲೆಕೋರರನ್ನು ಹಿಡಿದರು. ನಂತರ ಎಲ್ಲರೂ ವ್ಯಕ್ತಿಯನ್ನು ಹಿಡಿದು ಥಳಿಸಿದರು. ಕುರ್ಚಿಗಳನ್ನು ಹಿಡಿದು ತೂರಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
