fbpx
ಸಮಾಚಾರ

ಸಂಗೀತ ಕಾರ್ಯಕ್ರಮ ನೀಡುವಾಗಲೇ ಸಾವನ್ನಪ್ಪಿದ ಹೆಸರಾಂತ ಗಾಯಕ ಕೆಕೆ: ಇಲ್ಲಿದೆ ಅವರ ಕೊನೆ ವಿಡಿಯೋ

ಖ್ಯಾತ ಹಿನ್ನೆಲೆ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಜನಪ್ರಿಯ ಗಾಯಕ ಕೆಕೆ ಮಂಗಳವಾರ ತಮ್ಮ 53 ನೇ ವಯಸ್ಸಿನಲ್ಲಿ ವೇದಿಕೆ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದರು..

 

 

‘ಕೋಲ್ಕತ್ತದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕೆಕೆ ಅವರು ಸುಮಾರು ಒಂದು ಗಂಟೆ ಕಾಲ ಹಾಡಿದ್ದರು. ಆದರೆ, ಹೋಟೆಲ್‌ ತಲುಪಿದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

ಹಿಂದಿ ಮಾತ್ರವಲ್ಲದೆ ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಬೆಂಗಾಲಿ ಭಾಷೆಗಳಲ್ಲಿ 3 ದಶಕಗಳ ಕಾಲ ಕೆಕೆ ಹಾಡಿದ್ದರು. ಕನ್ನಡದ ರೌಡಿ ಅಳಿಯ, ಮನಸಾರೆ, ಮಳೆ ಬರಲಿ.. ಮಂಜು ಇರಲಿ ಚಿತ್ರಗಳಲ್ಲಿ ಹಾಡಿಗೆ ದನಿ ಆಗಿದ್ದಾರೆ. 1968ರ ಆಗಸ್ಟ್​​ 23ರಂದು ದೆಹಲಿಯಲ್ಲಿ ಜನಸಿದ್ದ ಕೃಷ್ಣ ಕುಮಾರ್ ಕುನ್ನತ್​​ ಅವರು ಕೆಕೆ ಎಂದು ಪ್ರಸಿದ್ಧರಾಗಿದ್ದರು. ಖ್ಯಾತ ಗಾಯಕ ಎ.ಆರ್​ ರೆಹಮಾನ್​ ಅವರು ಕುನ್ನತ್​ ಅವರನ್ನ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದರು.

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top