fbpx
ಸಮಾಚಾರ

ಕನ್ನಡದ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದ ತಮ್ಮ ಸ್ವಗೃಹದಲ್ಲಿ ನಟ ಉದಯ್ ಹುತ್ತಿನಗದ್ದೆ ಕೊನೆಯುಸಿರೆಳೆದಿದ್ದಾರೆ. ಮಾಗಡಿ ರಸ್ತೆಯಲ್ಲಿ ವಾಸವಾಗಿದ್ದ ಉದಯ್ ಹುತ್ತಿನಗದ್ದೆ ಅವರು, ರಾಜಾಜಿನಗರದ ಬಾಷ್ಯಂ ಸರ್ಕಲ್‌ನಲ್ಲಿ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದರು.

ಇತ್ತೀಚೆಗೆ ಅವರು ನರಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆಯೂ ಅವರನ್ನು ಬಾಧಿಸಿತ್ತು. ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪಾರ್ಥೀವ ಶರೀರವನ್ನು ರಾಜಾಜಿನಗರದ ಅವರ ನಿವಾಸದಲ್ಲಿ ಇರಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ಪ್ರಶಸ್‌ ತಿಳಿಸಿದರು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆ ಎಂಬ ಊರಿನಲ್ಲಿ ಜನಿಸಿದವರು ಉದಯ್ ಹುತ್ತಿನಗದ್ದೆ. ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದು ‘ಅಭಿನಯ ತರಂಗ’ದಲ್ಲಿ ನಟನೆ ತರಬೇತಿ ಪಡೆದರು. ಬಳಿಕ ಚಿತ್ರರಂಗಕ್ಕೆ ಬಂದ ಅವರು. ದಿಗ್ಗಜ ನಟರಾದ ರಾಜ್‌ಕುಮಾರ, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ಡಾ.ವಿಷ್ಣುವರ್ಧನ್, ಟೈಗರ್ ಪ್ರಭಾಕರ್ ಮುಂತಾದವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

1989 ರಲ್ಲಿ ರಿಲೀಸ್ ಆಗಿದ್ದ ‘ಜಯಭೇರಿ’, 1990 ರಲ್ಲಿ ಬಿಡುಗಡೆ ಆಗಿದ್ದ ‘ಉದ್ಭವ’, 1990 ರಲ್ಲಿ ತೆರೆಗೆ ಬಂದಿದ್ದ ‘ಅಮೃತ ಬಿಂದು’, 1991 ರಲ್ಲಿ ಪ್ರೇಕ್ಷಕರೆದುರಿಗೆ ಬಂದಿದ್ದ ‘ಶಿವಯೋಗಿ ಅಕ್ಕಮಹಾದೇವಿ’, 1991 ರಲ್ಲಿ ರಿಲೀಸ್ ಆಗಿದ್ದ ‘ಉಂಡು ಹೋದ ಕೊಂಡು ಹೋದ’, 1991 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಮ’ ಚಿತ್ರಗಳಲ್ಲಿ ಉದಯ್ ಹುತ್ತಿನಗದ್ದೆ ಮಿಂಚಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top