ಜನಸಾಮನ್ಯರಿಗೆ ಶಾಕ್ ಮೇಲೆ ಶಾಕ್ ಬೀಳುತ್ತಲೇ ಇದೆ. ಇದೀಗ ಕೇಂದ್ರ ಸರ್ಕಾರ ಜನಸಾಮನ್ಯರಿಗೆ ಮತ್ತೊಂದು ಶಾಕ್ ನೀಡಿದ್ದು ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ “ಕೋವಿಡ್ ಶುರುವಾದ ದಿನದಿಂದ ಎಲ್ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ” ಹೀಗಾಗಿ ಜನಸಾಮಾನ್ಯರು ಮಾರುಕಟ್ಟೆ ದರದಲ್ಲಿ ಲಭ್ಯವಾಗುತ್ತಿರುವ ಅಡುಗೆ ಅನಿಲವನ್ನು ಖರೀದಿ ಮಾಡುವ ಅನಿವಾರ್ಯ ಎದುರಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರು ಮಾತ್ರ ಸಬ್ಸಿಡಿ ಪಡೆಯಬಹುದು. ಉಳಿದ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಬ್ಸಿಡಿ ದೊರೆಯುವುದಿಲ್ಲ. ಪ್ರಸ್ತುತ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 1006 ರೂಪಾಯಿ ಆಗಿದೆ. ಇದು ಜನಸಾಮಾನ್ಯರ ಬದುಕಿಗೆ ದೊಡ್ಡ ಹೊಡೆತ ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
