ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ.
ಶಂಕಿತ ಉಗ್ರ ತಾಲಿಬ್ ಹುಸೇನ್ ಕಾಶ್ಮೀರದಿಂದ ಕೆಲ ವರ್ಷಗಳ ಹಿಂದೆ ಪರಾರಿಯಾಗಿದ್ದ. ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ತಾಲಿಬ್ ಹೆಸರು ಬದಲಿಸಿಕೊಂಡು ಕೆಲಸ ಮಾಡುತ್ತಿದ್ದ. ಮೊದಮೊದಲು ರೈಲ್ವೇ ನಿಲ್ದಾಣದಲ್ಲಿ ಕೂಲಿ ಮಾಡುತ್ತಿದ್ದ ಎನ್ನಲಾಗಿದೆ. ಅದಾದ ನಂತರ ಮಸೀದಿಯೊಂದರಲ್ಲಿ ವಾಸವಿದ್ದ, ಅಲ್ಲೇ ಪಾಠ – ಪ್ರವಚನವನ್ನೂ ಮಾಡುತ್ತಿದ್ದ ಎಂದು ಶಂಕಿಸಲಾಗಿದೆ.
ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಉಗ್ರ ತಾಲಿಬ್, ಬಿಎನ್ಎಲ್ ಏರ್ ಸರ್ವಿಸ್ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಸಲೀಮಾ (35) ಮತ್ತು ಆಸೀಫ್(6),ದಾನೀಫರ್ (10),ಆಶಿಯಾ(2) ಎಂಬ ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
