ಜನಪ್ರಿಯ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರ ಗುಣರಂಜನ್ ಶೆಟ್ಟಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತೆ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಗುಣರಂಜನ್ ಅವರು ಕರ್ನಾಟಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. ಗುಣರಂಜನ್ ಶೆಟ್ಟಿ ನಡೆಸುತ್ತಿರುವ ಜಯಕರ್ನಾಟಕ ಜನಪರ ವೇದಿಕೆಯ ಸದಸ್ಯರು ರಕ್ಷಣೆ ಹಾಗೂ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.
ಸ್ನೇಹಿತರಾದ ಮನ್ವಿತ್ ರೈ ಮತ್ತು ರಾಕೇಶ್ ಮಲ್ಲಿ ಅವರು ಗುಣರಂಜನ್ ಶೆಟ್ಟಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜಯಕರ್ನಾಟಕ ಜನಪರ ವೇದಿಕೆ ಸದಸ್ಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಒತ್ತಾಯಿಸಿದ್ದಾರೆ. ಮಾನ್ವಿತ್ ರೈ ಮತ್ತು ರಾಕೇಶ್ ಮಲ್ಲಿ ಅನುಷ್ಕಾ ಸಹೋದರನನ್ನು ಕೊಲ್ಲಲು ಯೋಜಿಸಿದ್ದರು ಎಂದು ಆರೋಪಿಸಲಾಗಿದೆ.
ಇವೆಲ್ಲದರ ಮಧ್ಯೆ ಮನ್ವಿತ್ ರೈ ಮಾತನಾಡಿದ್ದು “ನಾನು ಪ್ರಸ್ತುತ ವಿದೇಶದಲ್ಲಿದ್ದು, ನನ್ನ ವಿರುದ್ಧ ಏಕೆ ಆರೋಪಗಳನ್ನು ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ವಿಫಲನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ”. ದೂರು ಸ್ವೀಕರಿಸಿದ ಪೊಲೀಸರು ರಾಕೇಶ್ ಮಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
