ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರದಲ್ಲಿ ನಡೆದಿದೆ.. ಪ್ರಕರಣ ಸಂಭಂದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅವರಿಗೆ ೩೧ ವರ್ಷ ವಯಸ್ಸಾಗಿತ್ತು.
ಸತೀಶ್ ವಜ್ರ, ಅವರ ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿರುವಾಗ ಕೊಲೆ ಮಾಡಿ ಹೋಗಿರುವ ದುಷ್ಕರ್ಮಿಗಳು, ಆರ್.ಆರ್ ನಗರದ ನಿವಾಸದಲ್ಲಿ ನಟನ ಹತ್ಯೆ ಮಾಡಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 7 ತಿಂಗಳ ಹಿಂದೆ ಸತೀಶ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಸಹೋದರಿಯ ಹತ್ಯೆಗೆ ಸತೀಶ್ ಬಾಮೈದ ಸೇಡು ತೀರಿಸಿಕೊಂಡಿರುವ ಶಂಕೆ ಇದೆ. ಆ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜ ರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಲಗೋರಿ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ಸತೀಶ್ ನಟಿಸಿದ್ದರು. ಹಲವಾರು ಸಿನೆಮಾಗಳಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲೂ ಅಭಿನಯಿಸಿದ್ದರು. ಮೂಲತಃ ಪಾಂಡವಪುರದ ಹಳೇಬಿಡಿ ಗ್ರಾಮದವರಾದ ಸತೀಶ್, ‘ಲಗೋರಿ’, ‘ಕ್ರಶ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಸಹನಟರಾಗಿ ನಟಿಸಿದ್ದರು ಎನ್ನಲಾಗಿದೆ. ಸಿನಿಮಾ ನಟನೆ ಜತೆಗೆ ಆರ್ಆರ್ ನಗರದಲ್ಲಿ ‘ವಜ್ರ’ ಹೆಸರಿನಲ್ಲಿ ಸಲೂನ್ ನಡೆಸುತ್ತಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
