ನಾನು ಮನಸ್ಸು ಮಾಡಿದರೆ ಯಾವತ್ತಾದ್ರೂ ಒಂದು ಮುಖ್ಯಮಂತ್ರಿ ಆಗುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ತನ್ನ ರಾಜಕೀಯದ ಗುರಿಯನ್ನು ಪರೋಕ್ಷವಾಗಿ ಜನತೆಯ ಮುಂದೆ ತೆರೆದಿಟ್ಟಿದ್ದಾರೆ.
ನಿನ್ನೆ ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು. ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದರು.
ಸಾಮಾನ್ಯ ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದರು. ಸೋಮಶೇಖರರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷ ಆಗಿ ಕೆಲಸ ಮಾಡಿದರು. ನನ್ನ ಬಂಧನ ಮಾಡಲು ಬಂದಿದ್ದ ಸಿಬಿಐ ಅಧಿಕಾರಿಗಳೇ ಖುದ್ದು ಹೇಳಿದರು. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ. ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ಜನಾರ್ದನ ರೆಡ್ಡಿ ಹೇಳಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
