fbpx
ಸಮಾಚಾರ

ಲೈಂಗಿಕ ಕಿರುಕುಳ ಪ್ರಕರಣ: ‘ಪೈಲ್ವಾನ್’ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯಗೆ ಜಾಮೀನು

ಕನ್ನಡದ ಪೈಲ್ವಾನ್ ಚಿತ್ರಕ್ಕೆ ಕೊರಿಯೋಗ್ರಫಿ ಮಾಡಿದ್ದ ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಳೆದ ಎರಡು ವರ್ಷದಿಂದ ಲೈಂಗಿಕ ಕಿರುಕುಳ ಆರೋಪ ಏದುರಿಸುತ್ತಿದ್ದಾರೆ. ಇದೀಗ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನೂರಾರು ಸೂಪರ್ ಹಿಟ್​ ಗೀತೆಗಳಿಗೆ ನೃತ್ಯ ನಿರ್ದೇಶನ ಮಾಡಿದ ಖ್ಯಾತಿ ಗಣೇಶ್​ ಆಚಾರ್ಯ ಅವರಿಗೆ ಸಲ್ಲುತ್ತದೆ. ಹಲವು ವರ್ಷಗಳಿಂದ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ನಟನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 2020ರ ಫೆಬ್ರವರಿಯಲ್ಲಿ ಸಹಾಯಕ ನೃತ್ಯ ನಿರ್ದೇಶಕಿಯ ಜೊತೆ ಅವರು ಅನುಚಿತವಾಗಿ ನಡೆದುಕೊಂಡರು ಎಂಬ ಆರೋಪ ಇದೆ.

ಇಷ್ಟೇ ಅಲ್ಲದೆ, ‘ಗಣೇಶ್ ಆಚಾರ್ಯರ ಸಹಾಯಕಿಯರು ನನ್ನನ್ನು ಹಿಗ್ಗಾ ಮುಗ್ಗಾ ಹೊಡೆದಿದ್ದರು. ಅವಾಚ್ಯವಾಗಿ ನಿಂದಿಸಿದರು. ನಂತರ ನಾನು ಪೊಲೀಸ್ ಠಾಣೆಗೆ ಹೋದಾಗ ಸಹ ನನ್ನ ದೂರನ್ನು ಸೂಕ್ತ ರೀತಿಯಲ್ಲಿ ಪೊಲೀಸರು ಸ್ವೀಕರಿಸಲಿಲ್ಲ. ಬಳಿಕ ನಾನು ವಕೀಲರ ಸಹಾಯದಿಂದ ಪ್ರಕರಣ ದಾಖಲಿಸಿದೆ’ ಎಂದು ನೃತ್ಯಗಾರ್ತಿ ಆರೋಪಿಸಿದ್ದಾರೆ. ‘ಗಣೇಶ್ ಆಚಾರ್ಯ ಬೇಡಿಕೆಗೆ ನಾನು ಒಪ್ಪದೇ ಹೋದಾಗ, ಭಾರತೀಯ ಸಿನಿಮಾ ಮತ್ತು ಟಿವಿ ಕೊರಿಯೋಗ್ರಾಫರ್ ಸಂಘದಿಂದ ನನ್ನನ್ನು ತೆಗೆದು ಹಾಕಲಾಯಿತು. ನನಗೆ ಬೆದರಿಕೆಗಳನ್ನು ಸಹ ಹಾಕಲಾಯಿತು’ ಎಂದು ನೃತ್ಯಗಾರ್ತಿ ದೂರಿನಲ್ಲಿ ಉಲ್ಲೇಖಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top