ಕನ್ನಡ ಸಿನಿರಂಗದ ಖ್ಯಾತ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತವಾಗಿದೆ. ಸೂರಪ್ಪ ಬಾಬು ಅವರು ಕುಟುಂಬದವರ ಜೊತೆ ದೇವಸ್ಥಾನದಿಂದ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ನೆನ್ನೆ ಬೆಳಿಗ್ಗೆ ಈ ಅಪಘಾತ ನಡೆದಿದ್ದು, ಸದ್ಯ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಲಾಗಿದೆ.
ಸೂರಪ್ಪ ಬಾಬು ಕುಟುಂಬಸ್ಥರು ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹೊಸೂರು ಕ್ರಾಸ್ ಬಳಿ ಕಾರು ಆ್ಯಕ್ಸಿಡೆಂಟ್ ಆಗಿದೆ. ಈ ವೇಳೆ ಮುಂಭಾಗದಲ್ಲಿ ಕೂತಿದ್ದ ಸೂರಪ್ಪ ಬಾಬು ಅವರ ಕಾಲಿಗೆ ಪೆಟ್ಟಾಗಿದ್ದು, ಇತರರಿಗೆ ಯಾವುದೇ ತೊಂದರೆಯಾಗಿಲ್ಲ. ಕಾಲಿಗೆ ಕೊಂಚ ಪೆಟ್ಟು ಬಿದ್ದ ಕಾರಣ ವೈದ್ಯರಿಗೆ ತೋರಿಸಲು ಸೂರಪ್ಪ ಬಾಬು ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸೂರಪ್ಪ ಬಾಬು ಈ ರೀತಿಯ ಅವಘಡ ಸಂಭವಿಸಿದ್ದು ಇದೇ ಮೊದಲು ಎಂದು ಹೇಳಿದ್ದಾರೆ. ಅಪಘಾತವಾದಾಗ ಅನೇಕರು ಬಂದು ಸಹಾಯ ಮಾಡಿದರು. ತಮಿಳುನಾಡಿನಿಂದ ಬೆಂಗಳೂರಿಗೆ ಪಾವಾಸ್ ಆಗಲು ಸಹಾಯ ಮಾಡಿದರು. ಕಾಲಿಗೆ ಸ್ವಲ್ಪ ಏಟಾಗಿದೆ. ವೈದ್ಯರನ್ನು ಸಂಪರ್ಕಮಾಡಿ ಚಿಕಿತ್ಸೆ ಪಡೆದಿದ್ದೀನಿ. ಸದ್ಯ ಬ್ಯಾಂಡೇಜ್ ಹಾಕಿದ್ದಾರೆ. ಈಗ ಆರಾಮಾಗಿ ಇದ್ದೀನಿ. ಇನ್ನು ಸ್ವಲ್ಪ ದಿನಗಳು ವಿಶ್ರಾಂತಿ ಪಡೆಯಲು ವೈದ್ಯರ ಹೇಳಿದ್ದಾರೆ ಎಂದು ಸೂರಪ್ಪ ಬಾಬು ಹೇಳಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ವಿತರಕರಾಗಿ ಹಾಗೂ ನಿರ್ಮಾಪಕರಾಗಿ ತೊಡಗಿಸಿಕೊಂಡಿರುವ ಸೂರಪ್ಪ ಬಾಬು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸಾಹಸಿಂಹ ಸಿಂಹ ವಿಷ್ಣುವರ್ಧನ್ ಅಭಿನಯದ ಸೂರಪ್ಪ, ಕೋಟಿಗೊಬ್ಬ, ಕದಂಬ,, ಪುನೀತ್ ರಾಜ್ ಕುಮಾರ್ ಅಭಿನಯದ ಪೃಥ್ವಿ, ರವಿಚಂದ್ರನ್ ಅಭಿನಯದ ದಶಮುಖ ಹಾಗೂ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-2, ಕೋಟಿಗೊಬ್ಬ-3 ಸಿನಿಮಾಗಳನ್ನು ಸೂರಪ್ಪ ಬಾಬು ನಿರ್ಮಿಸಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
