ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಸುದೀಪ್ ಅವರು ಕಳೆದ ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಸುದೀಪ್ ಅವರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಅದರಲ್ಲಿ ಫಲಿತಾಂಶ ಪಾಸಿಟಿವ್ ಬಂದಿದೆ. ಸದ್ಯ ಕಿಚ್ಚ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸುದೀಪ್ ಅವರು ಸದ್ಯ ಬಿಡುಗಡೆಗೆ ಸಿದ್ದವಾಗಿರುವ ಅವರ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾದ ಕಾರ್ಯಕ್ರಮಗಳಲ್ಲಿ ಬ್ಯುಸಿಯಗಿದ್ದರು. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸುದೀಪ್ ತೊಡಗಿಕೊಂಡಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವ ಕಾರಣ ಸಿನಿಮಾದ ಪ್ರಚಾರ ಕಾರ್ಯಕ್ಕಾಗಿ ಅನೇಕ ರಾಜ್ಯಗಳಿಗೆ ಸುತ್ತಾಡುತ್ತಿದ್ದರು ಸಿನಿಮಾ ಪ್ರಚಾರ ಮಾಡುತ್ತಿದ್ದರು.
ಅಂದಹಾಗೆ ಕಿಚ್ಚ ಸುದೀಪ್ ಗೆ ಕೊರೊನಾ ಸೋಂಕು ತಗುಲುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಕಳೆದ ವರ್ಷ ಕೊರೊನಾ ಹಾವಳಿ ಹೆಚ್ಚಿದ್ದ ಸಮಯದಲ್ಲಿ ಸುದೀಪ್ ಕೋವಿಡ್ ಸೋಂಕಿಗೆ ಒಳಗಾಗಿದ್ದರ. ಕೊರೊನಾಗೆ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು. ಇದೀಗ ಮತ್ತೊಮ್ಮೆ ಸೋಂಕು ತಗುಲಿದೆ.
ನೆಚ್ಚಿನ ನಟ ಸುದೀಪ್ ಬೇಗ ಹುಷಾರಾಗಲಿ ಎಂದು ಕಿಚ್ಚ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಕನ್ನಡ ಹೆಮ್ಮೆಯ ನಟರಾದ ಸುದೀಪ್ ಅವರು ಬಹುಬೇಗ ಗುಣಮುಖರಾಗಲಿ ಎಂದು ನಾವು ಕೂಡ ಹಾರೈಸುತ್ತೇವೆ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
