ತನಗೆ ನೀಡಿದ್ದ ಸರ್ಕಾರೀ ಹುದ್ದೆಯನ್ನು ಮೋದಿ ತಂಡದ ಸಾರಥಿ ಸೂಲಿಬೆಲೆ ನಿರಾಕರಿಸಿದ್ದಾರೆ. ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ 21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲಾಗಿದೆ. ಶ್ರೀ ಗಳಗನಾಥ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನಕ್ಕೆ ಸೂಲಿಬೆಲೆ ಅವರಿಗೆ ಅಧ್ಯಕ್ಷ ಸ್ಥಾನ ನಿಡಲಾಗಿದ್ದು, ಆದರೆ ಚಕ್ರವರ್ತಿಯವರು ಈ ಹುದ್ದೆಯನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಸೂಲಿಬೆಲೆಯ ಫೇಸ್ಬುಕ್ ಪೋಸ್ಟ್ ಈ ರೀತಿ ಇದೆ:
ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ. ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು.
ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
