40 ಪರ್ಸೆಂಟ್ ಕಮಿಷನ್ ವಿಚಾರದಲ್ಲಿ ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಸೆಟೆದು ನಿಂತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅಭಿಯಾನ ಆರಂಭಿದೆ. ಅಭಿಯಾನಕ್ಕಾಗಿ ’40 ಪರ್ಸೆಂಟ್ ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ’ ಹೆಸರಿನಲ್ಲಿ ಅಭಿಯಾನ ನಡೆಸಲಾಗುತ್ತಿದೆ.
ಹಲವು ವಾರಗಳಿಂದ ಕರ್ನಾಟಕದಲ್ಲಿ ಈ ಕ್ಯಾಂಪೇನ್ ಜೋರಾಗಿದ್ದು, ಈ ನಡುವೆ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬಾಲಿವುಡ್ ನ ನಟ ಅಖಿಲ್ ಅಯ್ಯರ್ ಅವರ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅವರೇ ಟ್ವಿಟ್ ಮಾಡಿದ್ದಾರೆ.
ನನ್ನ ಫೋಟೋವನ್ನು ಅನುಮತಿ ಇಲ್ಲದೆ ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಇದರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಅವರು ಟ್ವಿಟ್ ಮಾಡಿದ್ದಾರೆ. ತಮ್ಮ ಟ್ವಿಟ್ ಅನ್ನು ರಾಹುಲ್ ಗಾಂಧಿ, ಸಿದ್ಧರಾಮಯ್ಯ ಮತ್ತು KPCC ಖಾತೆ ಟ್ಯಾಗ್ ಮಾಡಿದ್ದಾರೆ. ಈ ಘಟನೆಯಿಂದ ತಮಗೆ ನೋವಾಗಿದೆ ಎಂದು ಅಖಿಲ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಅಂದಹಾಗೆ ನಟ ಅಖಿಲ್ ಅವರು ಬೆಂಗಳೂರು ಮೂಲದವರು. ಹಲವು ಸಿನಿಮಾಗಳಲ್ಲಿ ಅಖಿಲ್ ನಟಿಸಿದ್ದು, ಕೆಲ ಜಾಹೀರಾತು ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
