ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಗೆದ್ದಿದೆ. ವಿರಾಟ್ ಕೊಹ್ಲಿಯ ಬ್ಯಾಟಿಂಗ್ನಿಂದ ಭರ್ಜರಿ ಜಯ ಸಾಧಿಸಿದೆ. ಇಡೀ ದೇಶವೇ ಪಂದ್ಯ ಗೆದ್ದ ಸಂಭ್ರಮದಲ್ಲಿದ್ದರೆ ಮೋದಿ ಬ್ರಿಗೇಡ್ ಸಂಸ್ಥಾಪಕ ಸೂಲಿಬೆಲೆ ಮಾತ್ರ ಈ ವಿಚಾರದಲ್ಲೂ ರಾಜಕೀಯ ತಂದು ನೆಟ್ಟಿಗರಿಂದ ತರಾಟೆಗೆ ಒಳಗಾಗಿದ್ದಾರೆ
ಪಂದ್ಯ ಮುಕ್ತಾಯವಾದ ಬಳಿಕ ಟ್ವೀಟ್ ಮಾಡಿದ್ದ ಸೂಲಿಬೆಲೆ, ಪಂದ್ಯ ಗೆಲ್ಲಿಸಿದಕ್ಕಾಗಿ ವಿರಾಟ್ ಕೊಹ್ಲಿಯವರಿಗೆ ಅಭಿನಂದನೆಗಳು. ಆದರೆ ಈ ಗೆಲುವನ್ನು ಸಂಭ್ರಮಿಸುವುದು ಹೇಗೆ? ಏಕೆಂದರೆ ಪಟಾಕಿ ರಹಿತ ದೀಪಾವಳಿ ಆಚರಿಸಲು ನೀವು ಸಲಹೆ ನೀಡಿದ್ದೀರಿ ಎಂದು ಅಸಹ್ಯಕಾರಿ ಟ್ವೀಟ್ ಮಾಡಿದ್ದರು.
ಕಳೆದ ವರ್ಷ ಅಂದರೆ ದೀಪಾವಳಿ ಹಬ್ಬಕ್ಕೆ ಶುಭಕೋರಿದ್ದ ವಿರಾಟ್ ಕೊಹ್ಲಿ ಯಾವುದೇ ಪಟಾಕಿ ಸಿಡಿಸದೇ ಅರ್ಥಪೂರ್ಣವಾಗಿ ದೀಪಾವಳಿ ಆಚರಿಸಿ ಎಂದು ಮನವಿ ಮಾಡಿದ್ದರು. ಅಲ್ಲದೆ ಮಾಲಿನ್ಯ ಮುಕ್ತ ದೀಪಾವಳಿಗೆ ಬೆಂಬಲ ವ್ಯಕ್ತಪಡಿಸಿದ್ದರು.. ಆ ಸಮಯದಲ್ಲಿ ಅನೇಕ ಹಿಂದುತ್ವವಾದಿಗಳು ಕೊಹ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಇದೆ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಈ ಗೆಲುವನ್ನು ಸಂಭ್ರಮಿಸುವಬದಲು ಕೊಹ್ಲಿ ವಿರುದ್ಧ ಅಪಹಾಸ್ಯ ಮಾಡಿ ಸೂಲಿಬೆಲೆ ನೆಟ್ಟಿಗರಿಂದ ಮಂಗಳಾರತಿ ಮಾಡಿಕೊಂಡಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಅವರ ಈ ಟ್ವೀಟ್ಗೆ ವಿರಾಟ್ ಕೊಹ್ಲಿಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಸೂಲಿಬೆಲೆಗೆ ಬೆವರಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
