ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ತಂಡದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಿಡ್ನಿಯಲ್ಲಿ ಭಾನುವಾರ ದನುಷ್ಕಾ ಗುಣತಿಲಕರನ್ನು ಪೊಲೀಸರು ಬಂಧಿಸಿದ್ದರು. ಶ್ರೀಲಂಕಾದ ಕ್ರಿಕೆಟ್ ಬೋರ್ಡ್ ದನುಷ್ಕಾ ಗುಣತಿಲಕರನ್ನು ಎಲ್ಲಾ ಮಾದರಿ ಕ್ರಿಕೆಟ್ನಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಟಿ೨೦ ವಿಶ್ವಕಪ್ ವೇಳೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರಿಗೆ ಸಿಡ್ನಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ನವೆಂಬರ್ ೨ ರಂದು ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ನಂತರ ೩೧ ವರ್ಷದ ಗುಣತಿಲಕ ಅವರನ್ನು ಭಾನುವಾರ ನಸುಕಿನಲ್ಲಿ ಬಂಧಿಸಲಾಯಿತು.
ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
