ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದು ಹೇಳಿದ್ದ ಸಾಹಿತಿ, ಚಿಂತಕಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಗೆ ಸಂಕಷ್ಟ ಎದುರಾಗಿದೆ. ಈ ಹೇಳಿಕೆ ವಿಚಾರವಾಗಿ ಉಡುಪಿ ನಗರ ಠಾಣೆಗೆ ಹಿಂದೂ ಜಾಗರಣ ವೇದಿಕೆ ಬಿ.ಟಿ.ಲಲಿತಾ ನಾಯಕ್ ವಿರುದ್ಧ ದೂರು ನೀಡಿದೆ. ಲಲಿತಾ ಅವರ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ. ಮೂರು ವರ್ಷ ಶಿಕ್ಷೆ, ದಂಡ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಲಲಿತಾ ನಾಯಕ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಪಕ್ಕಲು ಎಂಬವರು ದೂರು ನೀಡಿದ್ದಾರೆ. ಲಲಿತಾ ನಾಯಕ್ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ. ಒಂದು ವರ್ಗ, ಸಮುದಾಯದ ಅವಹೇಳನವಾದಾಗ ಜಾರಿಯಾಗುವ ಸೆಕ್ಷನ್ ಹಾಕುವಂತೆ ಮನವಿ ಮಾಡಿದ್ದೇವೆ. ಮೂರು ವರ್ಷ ಶಿಕ್ಷೆ, ದಂಡ ವಿಧಿಸಬೇಕು ಎಂದು ಹಿಂದು ಜಾಗರಣಾ ವೇದಿಕೆ ಒತ್ತಾಯ ಮಾಡಿದೆ ಎಂದಿದ್ದಾರೆ ಉಮೇಶ್ ಪಕ್ಕಲು.
ಲಲಿತ್ ನಾಯಕ್ ಹೇಳಿದ್ದೇನು?
ದೈವ ನರ್ತಕರಿಗೆ ಸರ್ಕಾರ 2 ಸಾವಿರ ರೂಪಾಯಿ ಮಾಸಾಶನ ಮಂಜೂರು ಮಾಡಿತ್ತು. ಈ ವೇಳೆ ಈ ನಿರ್ಧಾರವನ್ನು ಲಲಿತ ನಾಯಕ್ ವಿರೋಧಿಸಿದ್ದರು. ಭೂತಾರಾಧನೆಯ ಸಮಯದಲ್ಲಿ ದೇವರು ಬರುತ್ತಾರೆ ಅನ್ನೋದೆಲ್ಲಾ ಸುಳ್ಳು. ದೈವ ನರ್ತಕರು ಓಹೋ ಎಂದು ಚೀರಾಟ ಮಾಡುವುದು ಕುಣಿಯುವುದರ ಹಿಂದೆ ಬೇರೆಯದೇ ಆದ ಕಾರಣವಿದೆ ಅಂತ ಹೇಳಿದ್ದಾರೆ. ಅಲ್ಲದೇ ದೈವ ನರ್ತಕರಿಗೆ ಮಾಶಾಸನ ನೀಡಬಾರದು ಅಂತ ಅವರು ಹೇಳಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
