ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಅವರ ಬಗ್ಗೆ ಕಳೆದ ಕೆಲವೊಂದಷ್ಟು ದಿನಗಳಿಂದ ಊಹಾಪೋಹಗಳು ಹರಿದಾಡುತ್ತಿದ್ದವು. ಅವೇನೆಂದರೆ, ಸುಮಲತಾ ಅವರು ಮಂಡ್ಯ ಕ್ಷೇತ್ರ ಬಿಟ್ಟು ಬೇರೆಡೆ ಚುನಾವಣೆಗೆ ಸ್ಪರ್ಧಿಸುತ್ತಾರೆ, ಮಂಡ್ಯ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗಲಿದ್ದಾರೆ ಎಂದು.. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಸುಮಲತಾ ಅಂಬರೀಷ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ನಾನು ಮಂಡ್ಯ ಬಿಡುತ್ತೇನೆಂದು ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಜನರ ಆಸೆಯಂತೆ ನಾನು ಮಂಡಕ್ಕೆ ಬಂದಿದ್ದು. ನಾನ್ಯಾಕೆ ಮಂಡ್ಯ ಜಿಲ್ಲೆ ಬಿಟ್ಟು ಮತ್ತೊಂದು ಕಡೆ ಹೋಗಬೇಕು? ಎಂದು ಪ್ರಶ್ನಿಸುವ ಮೂಲಕ ಪರೋಕ್ಷವಾಗಿ ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟರು.
ನಾನು ರಾಜಕೀಯಕ್ಕೆ ಬಂದಿರುವುದೇ ಮಂಡ್ಯಕ್ಕೋಸ್ಕರ. ರಾಜಕೀಯದಲ್ಲಿ ಏನೇನೋ ಆಗಬೇಕೆಂದು ಮಂಡ್ಯಕ್ಕೆ ಬಂದಿಲ್ಲ. ಇಂದಲ್ಲ ನಾಳೆ ರಾಜಕೀಯ ಬಿಡುತ್ತೇನೆ. ಆದರೆ ಮಂಡ್ಯ ಬಿಡಲ್ಲ. ಮಂಡ್ಯ ಬಿಟ್ಟು ಹೋಗಲ್ಲವೆಂದು ಸಂಸದೆ ಸುಮಲತಾ ಹೇಳಿದರು. ಈ ಮೂಲಕ ಸುಮಲತಾ ಅವರು ಮಂಡ್ಯ ಕ್ಷೇತ್ರ ಬಿಡುತ್ತಾರೆ ಎಂಬ ವದಂತೆಗೆ ತೆರೆ ಎಳೆದಿದ್ದಾರೆ .
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
