ಅಗ್ನಿಸಾಕ್ಷಿ ಖ್ಯಾತಿಯ ನಟಿ ‘ವೈಷ್ಣವಿ ಗೌಡ’ ಅವರ ಮದುವೆಗೆ ಸಂಭಂದಿಸಿದ ಸುದ್ದಿ ಸಮಾಜಿಕ ಜಾಲತಾಣಗಲ್ಲಿ ಹೆಚ್ಚಾಗಿ ಹರಿದಾಡುತ್ತಿದೆ. ವೈಷ್ಣವಿ ಗೌಡ ಅವರು ಹುಡುಗನೊಬ್ಬನ ಜೊತೆ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಈ ಫೋಟೋ ವೈರಲ್ ಆಗುತ್ತಿದ್ದಂತೆ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸುದ್ದಿಯಾಗಿತ್ತು,. ಆದರೆ ಈ ವಿಚಾರವಾಗಿ ಇದೀಗ ಸ್ವತಃ ವೈಷ್ಣವಿ ಗೌಡ ಅವರೇ ಸ್ಪಷ್ಟನೆ ನೀಡಿದ್ದಾರೆ. ಮುಂದೆ ಓದಿ
ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ವೈಷ್ಣವಿ ಇದು ಅವರ ಮದುವೆಗೆ ಸಂಭಂದಿಸಿದ ವಿಚಾರ ಎಂಬುದನ್ನು ಒಪ್ಪಿಕೊಂಡಿದ್ದಾರೆ. “ಆದರೆ ಇದು ನಿಷ್ಚಿತಾರ್ಥ ಅಲ್ಲ” ಎಂದೂ ಸಹ ಹೇಳಿದ್ದಾರೆ. “ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್ ಹುಡುಗನ ಕಡೆಯವರು ಬಂದು ನೋಡಿ, ಮಾತುಕತೆ ಮಾಡಿರೋದು ನಿಜಾ ಆದರೆ ಇದು ಎಂಗೇಜ್ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಕೊಂಡಿಲ್ಲ” ಎಂದು ವೈಷ್ಣವಿ ಗೌಡ ಅವರು ಹೇಳಿದ್ದಾರೆ.
“ಮನೆಯವರು ನಿರ್ಧರಿಸಿರೋದು ನಿಜ. ಆದರೆ ಹುಡುಗ ನನಗೆ ಹೊಸ ವ್ಯಕ್ತಿ ಆಗಿರೋದ್ರಿಂದ ನನಗೂ ಸ್ವಲ್ಪ ಸಮಯಾವಕಾಶ ಬೇಕಾಗಿದೆ. ನಾನಿನ್ನೂ ಈ ಮದುವೆಗೆ ಒಪ್ಪಿಗೆ ಸೂಚಿಸಿಲ್ಲ. ನಾನು ಒಪ್ಪಿಕೊಂಡ ಮೇಲೆ ನಿಶ್ಚಿತಾರ್ಥ ಮದುವೆ ಎಲ್ಲಾ” ಎಂದು ವೈಷ್ಣವಿ ಗೌಡ ಸ್ಪಷ್ಟನೆ ನೀಡಿದ್ದಾರೆ.
ಹುಡುಗ ಯಾರು?
ವೈಷ್ಣವಿ ಜೊತೆ ಸಾಂಸಾರಿಕ ಜೀವನಕ್ಕೆ ಕಾಲಿಡಲಿರುವ ಹುಡುಗ ವಿದ್ಯಾ ಭರಣ್. ಈಗಾಗಲೇ ವಿರಾಜ್ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾದಲ್ಲಿ ವಿದ್ಯಾ ಭರಣ್ ನಾಯಕನಾಗಿ ನಟಿಸಿದ್ದರು. ಬೆಂಗಳೂರು ಮೂಲದ ವಿದ್ಯಾ ಭರಣ್ ಬಿಎಮ್ಎಸ್ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ನಟನಾಗಿ ಸಕ್ರಿಯರಾಗಿದ್ದಾರೆ..
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
