ಕರ್ನಾಟಕದ ಹೆಮ್ಮೆಯ ‘ನಂದಿನಿ’ ಸಂಸ್ಥೆಯನ್ನು ಗುಜರಾತಿನ ‘ಅಮುಲ್’ ಜೊತೆಗೆ ವಿಲೀನ ಮಾಡಲಾಗುತ್ತದೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ. ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತು ಗುಜರಾತ್ನ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (AMUL) ನಡುವಿನ ‘ಸಹಕಾರ’ದ ಕುರಿತು ಮಾತನಾಡಿ ಪರೋಕ್ಷವಾಗಿ ನಂದಿನಿ ಮತ್ತು ಅಮುಲ್ ವಿಲೀನದ ಪ್ರಸ್ತಾಪ ಮಾಡಿದ್ದರು. ಇದು ಕನ್ನಡಪರರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೆಎಂಎಫ್ ನೇಮಕಾತಿಯಲ್ಲಿ ಈ ಬಾರಿ ಗೋಲ್ ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಸಹಯೋಗ ಅಂದ್ರೆ ಇದೇನಾ ಮಾನ್ಯ @CMofKarnataka !#SaveNandini pic.twitter.com/6W32Jvr1mi
— GC ChandraShekhar (@GCC_MP) February 1, 2023
ಅರ್ಹ ಅಭ್ಯರ್ಥಿಗಳನ್ನು ಕೈಬಿಟ್ಟು ಅಮುಲ್ ಸಹಭಾಗಿತ್ವ ಹೊಂದಿರುವ ಖಾಸಗಿ ಕಂಪೆನಿಯೊಂದು ಕೆಎಂಎಫ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಿ ಹುದ್ದೆಗಳ ಭರ್ತಿ ಮಾಡಿದೆ ಎಂಬ ಆರೋಪವೊಂದು ಕೇಳಿಬಂದಿದೆ., KMFದಲ್ಲಿ ನಡೆದ 487 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಈ ಬಾರಿ ಅಮುಲ್ ಜೊತೆ ಸಹಭಾಗಿತ್ವ ಹೊಂದಿರುವ ಗುಜರಾತ್ ಮೂಲದ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ ಆನಂದ್ ಕಂಪೆನಿ ನಡೆಸಿತ್ತು. ಅದರಂತೆ ಡಿ.18ರಂದು ವಿವಿಧ ವೃಂದಗಳಿಗೆ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಏಕಾಏಕಿ ಜನವರಿ 25ರ ರಾತ್ರಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ, ಫೆ.2ರಿಂದ ಸಂದರ್ಶನಕ್ಕೆ ಬರುವಂತೆ ಆಹ್ವಾನಿಸಲಾಗಿದೆ. ಈ ಪಟ್ಟಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸದೆ ಗೋಲ್ ಮಾಲ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.. ಸಂದರ್ಶನ ಮತ್ತು ಅಂಕಗಳ ಮಾಹಿತಿಯೇ ನೀಡದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಖಾಸಗಿ ಪತ್ರಿಕೆಯೊಂದು ಮಾಡಿರುವ ವರದಿಯ ಪುಟವನ್ನು ಸಂಸದ ಜಿಸಿ ಚಂದ್ರಶೇಖರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
