ಪುನೀತ್ ಹೆಸರು ಅಜರಾಮರಕ್ಕೆ ಮತ್ತೊಂದು ಹೆಜ್ಜೆ ಇಡಲಾಗಿದ್ದು ಬೆಂಗಳೂರಿನ ಔಟರ್ ರಿಂಗ್ ರಸ್ತೆಗೆ ಪುನೀತ್ ರಾಜ್ಕುಮಾರ್ ಹೆಸರು ಇಡಲಾಗುತ್ತಿದೆ.. ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ವರೆಗಿನ ಹೊರವರ್ತುಲ ರಸ್ತೆಗೆ’ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ಇಡಲಾಗುತ್ತಿದೆ.
ಆದರೆ ಈ ಕಾರ್ಯಕ್ರಮ ಉದ್ಘಾಟನಾ ಸಮಾರಂಭಕ್ಕಾಗಿ ಹಾಕಲಾಗಿರುವ ಪ್ಲೆಕ್ಸ್ನಲ್ಲಿ ಕೇವಲ ರಾಜಕೀಯ ನಾಯಕರ ಫೋಟೋ ಮಾತ್ರವೇ ರಾರಾಜಿಸುತ್ತಿದೆ. ಆದರೆ, ಎಲ್ಲಿಯೂ ಪುನೀತ್ ರಾಜ್ಕುಮಾರ್ ಫೋಟೋ ಇಲ್ಲ. ಇದಕ್ಕೆ ಅಭಿಮಾನಿಗಳ ವಲಯದಿಂದ ಟಿಕೆ ವ್ಯಕ್ತವಾಗಿದೆ. ಪುನೀತ್ ಫೋಟೋವನ್ನು ಹಾಕಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.
ದೊಡ್ಡದಾಗಿ ಪ್ಲೆಕ್ಸ್ ಹಾಕಿಸಲಾಗಿದ್ದು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರ ಫೋಟೋಗಳು ಫ್ಲೆಕ್ಸ್ ನ ನಾಲ್ಕು ಬದಿಗಳಲ್ಲಿ ಹಾಕಲಾಗಿದೆ.. ಆದರೆ ಯಾರ ಸ್ಮರಣಾರ್ಥವಾಗಿ ಕಾರ್ಯಕ್ರಮ ಮಾಡಲಾಗುತ್ತಿದೆಯೋ ಅವರ ಫೋಟೋವನ್ನು ಎಲ್ಲಿಯೂ ಹಾಕಿಲ್ಲ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾಗಿದೆ. ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಾಕಬೇಕಿತ್ತು ಎಂದು ಅನೇಕರು ಆಗ್ರಹಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
