ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರು ವಿಧಿವಶರಾಗಿದ್ದಾರೆ. ವಯೋಸಹ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಇವರು ಪೂರ್ಣ ಹೆಸರು ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ 1956ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.
ಬಿ. ದೊರೈ ರಾಜ್ ಹಾಗೂ ಎಸ್.ಕೆ ಭಗವಾನ್ ಇಬ್ಬರೂ ಒಟ್ಟಾಗಿ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಜೋಡಿ ಚಿತ್ರರಂಗದಲ್ಲಿ ‘ದೊರೈ ಭಗವಾನ್’ ಎಂದೇ ಖ್ಯಾತಿಯಾಗಿತ್ತು. ದೊರೈ ರಾಜ್ ಅವರು 2000ನೇ ಇಸ್ವಿಯಲ್ಲಿ ನಿಧನ ಹೊಂದಿದ್ದರು. ಈ ಜೋಡಿ ಒಟ್ಟಾಗಿ 55 ಚಿತ್ರಗಳನ್ನ ನಿರ್ದೇಶನ ಮಾಡಿದ್ದರು. ವರನಟ ಡಾ.ರಾಜ್ಕುಮಾರ್ ಅವರ ಜೊತೆ ಹೆಚ್ಚಾಗಿ ಕೆಲ್ಸ ಮಾಡಿದ ಖ್ಯಾತಿ ಈ ಜೋಡಿಯದ್ದು. ಡಾ. ರಾಜ್ ನಟನೆಯ ಬ್ಲಾಕ್ ಬಸ್ಟರ್ ಹಿಟ್ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ಆಪರೇಶನ್ ಡೈಮಂಡ್ ರಾಕೆಟ್’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್ ಜೊತೆ ಸೇರಿ ನಿರ್ದೇಶಿಸಿದವರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
