ಇತ್ತೀಚಿಗೆ ಸಾರಿಗೆ ನೌಕರರ ಮುಷ್ಕರದ ಬಿಸಿ ಮಾಸುವ ಮುನ್ನ ಇದೀಗ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆಯ ಘಂಟೆ ಭಾರಿಸಿದಂತೆ ಆಗಿದೆ. ಯುಗಾದಿಯ ನಂತರ ಸಾರಿಗೆ ಬಸ್ ನೌಕರರು ಮುಷ್ಕರ ನಡೆಸಲು ತೀರ್ಮಾನಿಸುತ್ತಿದ್ದಾರೆ. ಮಾರ್ಚ್ 24ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.
ಮಾರ್ಚ್ 24 ರಿಂದ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಸಿಬ್ಬಂದಿ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಇದು ಒಂದು ಕಡೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದ್ದರೆ ಮತ್ತೊಂದು ಕಡೆ ಇದು ಜನಸಾಮನ್ಯರಿಗೆ ದೊಡ್ಡ ತೊಂದರೆಯಾಗುತ್ತದೆ. ಅದರಲ್ಲೂ ಹೆಚ್ಚಾಗಿ ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ದೊಡ್ಡ ತೊಂದರೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದು ಒಂದು ಕಡೆ ಆದರೆ ಮತ್ತೊಂದು ಕಡೆ ಮಾರ್ಚ್ 10 ರಿಂದ 29 ರ ವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷೆಗೆ ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೂ ಸಹ ಇದು ದೊಡ್ಡ ಮಟ್ಟದಲ್ಲಿ ತೊಂದರೆ ನೀಡುತ್ತದೆ.
ಮುಷ್ಕರಕ್ಕೆ ಕಾರಣ?
2021ರಲ್ಲಿ ಪ್ರತಿಭಟನೆ ನಡೆಸಿದಾಗ ಅಂದಿನ ಸಾರಿಗೆ ಸಚಿವರು ಲಿಖಿತ ಭರವಸೆಯನ್ನು ನೀಡಿದ್ದರು. ಆದರೆ ಆ ಎಲ್ಲಾ ಭರವಸೆಗಳು ಕೇವಲ ಕಾಗದದಲ್ಲಿಯೇ ಉಳಿದುಕೊಂಡಿವೆ. ಇದರಿಂದ ನೌಕರರು ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ ಎಂದು ಸರ್ಕಾರ ವಿರುದ್ಧ ಚಂದ್ರಶೇಖರ್ ಆಕ್ರೋಶ ಹೊರಹಾಕಿದರು. ಪ್ರಯಾಣಿಕರಿಗೆ ತೊಂದೆಯನ್ನುಂಟು ಮಾಡಬಾರದು ಎಂಬ ಉದ್ದೇಶದಿಂದ ಇಷ್ಟು ದಿನ ಮುಷ್ಕರಕ್ಕೆ ಕರೆ ನೀಡಿರಲಿಲ್ಲ. ಈಗ ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಿದೆ ಎಂದು ಹೇಳಿದರು.
ಮಾರ್ಚ್ 1 ರಂದು ಕೆಎಸ್ಆರ್ಟಿಸಿ ಎಂಡಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮುಷ್ಕರ ನಡೆಸುತ್ತೇವೆ ಎಂದು ಅವರಿಗೆ ತಿಳಿಸಿದ್ದೆವು. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸೋಮವಾರ ಕಾರ್ಮಿಕ ಆಯುಕ್ತರಿಗೆ 14 ದಿನಗಳ ಪ್ರತಿಭಟನೆಯ ನೋಟಿಸ್ ನೀಡುತ್ತವೆ ಎಂದು ಚಂದ್ರಶೇಖರ್ ಮಾಹಿತಿ ನೀಡಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
