ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದಾದ ಬಳಿಕ ಹಲವು ವಾಹನಗಳು ಈ ದಾರಿಯಲ್ಲಿ ಸಂಚರಿಸಿದವು. ನೆನ್ನೆಯಿಂದ ಟೋಲ್ ಸಂಗ್ರಹ ಕೂಡ ಆರಂಭವಾಗಿದೆ. ಆದರೆ ಇದೀಗ ಉದ್ಘಾಟನೆಗೊಂಡ ಹೆದ್ದಾರಿ ಕಿತ್ತುಕೊಂಡು ಬರುತ್ತಿದೆ.
ಉದ್ಘಾಟನೆಯಾದ ಮರುದಿನವೇ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಿತ್ತುಕೊಂಡು ಬಂದಿದೆ. ಡಾಂಬರ್ ಕಿತ್ತು ಬಂದು ಜಲ್ಲಿಕಲ್ಲುಗಳು ಕಾಣುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ.
ರಾಮನಗರ ಕಡೆಯಿಂದ ಬಿಡದಿ ಬೈಪಾಸ್ ರಸ್ತೆ ಮುಕ್ತಾಯದ ಜಾಗದಲ್ಲಿ ಸೇತುವೆಯೊಂದು ನಿರ್ಮಾಣ ಮಾಡಲಾಗಿದೆ. ಸೇತುವೆ ಆರಂಭದಲ್ಲಿ ರಸ್ತೆ ಕಿತ್ತು ಬಂದಿದೆ. ರಸ್ತೆ ಕಿತ್ತು ಬಂದ ಹಿನ್ನೆಲೆ ದುರಸ್ತಿ ಕಾರ್ಯ ಆರಂಭಗೊಂಡಿದೆ. ಫೋಟೋವನ್ನು ಗಮನಿಸಿದರೆ ರಸ್ತೆ ಕಿತ್ತು ಬಂದಿದ್ದು, ಜೆಲ್ಲಿ ಕಲ್ಲುಗಳು ಎದ್ದು ಕಾಣುತ್ತಿದೆ. ರಸ್ತೆಯ ಬದಿಗೆ ಬ್ಯಾರಿಕೇಡ್ ಹಾಕಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಸದ್ಯ ರಸ್ತೆಯ ಅರ್ಧಭಾಗದಲ್ಲಿ ವಾಹನಗಳು ಚಲಿಸುತ್ತಿವೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
