ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಕಳೆದ ಬಿಜೆಪಿ ಭಾಗಶಃ ನಿಂತು ಹೋಗಿತ್ತು. ಇದೀಗ ಕಾಂಗ್ರೆಸ್ ಬಂದ ತಕ್ಷಣ ಇಂದಿರಾ ಕ್ಯಾಂಟೀನ್ ಗಳನ್ನ ಮರು ಆರಂಭಿಸಲು ತೀರ್ಮಾನಿಸಲಾಗಿದ್ದು ಹಿಂದಿಗಿಂತಲೂ ಉತ್ತಮ ಗುಣಮಟ್ಟದಲ್ಲಿ ಸಿದ್ದರಾಮಯ್ಯ ಕಳೆದ ವಾರವಷ್ಟೇ ಹೇಳಿದ್ದರು. ಅಷ್ಟೇ ಅಲ್ಲದೆ ಇಂದಿರಾ ಕ್ಯಾಂಟೀನ್ ನಲ್ಲಿ ಮೊಟ್ಟೆ ನೀಡುವ ಬಗ್ಗೆ ಕೂಡ ಭಾರಿ ಚರ್ಚೆಯಾಗಿತ್ತು.
ಇದೀಗ ಇಂದಿರಾ ಕ್ಯಾಂಟೀನ್ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ ಎಂದು ಸಚಿವ ಸಮಾಜ ಕಲ್ಯಾಣ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಡಿ. ಮಹದೇವಪ್ಪ ಅವರು, ಇಂದಿರಾ ಕ್ಯಾಂಟೀನ್ನಲ್ಲಿ ಮಾಂಸಾಹಾರ ಪೂರೈಕೆ ವಿಚಾರವಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ಇಂದಿರಾ ಕ್ಯಾಂಟೀನ್ನಲ್ಲಿ ಸರ್ಕಾರದಿಂದ ಸಸ್ಯಾಹಾರದ ಊಟ ಕೊಡುತ್ತೇವೆ. ಹೊರಗಡೆಯಿಂದ ಮಾಂಸಾಹಾರ (ಕಬಾಬ್, ಚಿಕನ್ ಸಾಂಬಾರ್ ಇತ್ಯಾದಿ..) ತಂದು ಇಂದಿರಾ ಕ್ಯಾಂಟೀನ್ನಲ್ಲಿ ತಿನ್ನಬಹುದು. ಸದ್ಯಕ್ಕೆ ಇಂದಿರಾ ಕ್ಯಾಂಟೀನ್ ನಲ್ಲಿ ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ ಎಂದು ಮಾಹಿತಿ ನೀಡಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
