ಕರ್ನಾಟಕದ ಸ್ಟಾರ್ ಕ್ರಿಕೆಟಿಗ ಕರುಣ್ ನಾಯರ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ನಾಯರ್ ದೇಶಿ ಕ್ರಿಕೆಟ್ ನಲ್ಲಿ ಕರ್ನಾಟಕ ತಂಡಕ್ಕೆ ವಿದಾಯ ಹೇಳಿದ್ದಾರೆ. ಕರುಣ್ ನಾಯರ್ ಇನ್ಮುಂದೆ ವಿದರ್ಭ ಕ್ರಿಕೆಟ್ ಸಂಸ್ಥೆಗೆ ಆಡಲು ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವಿದಾಯ ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
“ಕಳೆದ ಎರಡು ದಶಕಗಳಿಂದ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ನೊಂದಿಗೆ ಪ್ರಯಾಣಿಸಲು ಸಂತೋಷವಾಗಿದೆ. ನನಗೆ ಈ ಅವಕಾಶವನ್ನು ನೀಡಿದ ಕೆಎಸ್ಸಿಇಗೆ ಧನ್ಯವಾದಗಳು. ಅಂತೆಯೇ, ಈ ಪ್ರಯಾಣದಲ್ಲಿ ನನಗೆ ಬೆಂಬಲ ನೀಡಿದ ಕೋಚಿಂಗ್ ಸ್ಟಾಪ್ಗಳು, ನಾಯಕರು ಮತ್ತು ತಂಡದ ಸಹ ಆಟಗಾರರಿಗೆ ನನ್ನ ಪ್ರಾಮಾಣಿಕ ಧನ್ಯವಾದಗಳು.” ನಾಯರ್ ಅವರು X(ಟ್ವಿಟ್ಟರ್) ನಲ್ಲಿ ಹೇಳಿದ್ದಾರೆ.
ಕರುಣ್ ನಾಯರ್ 2013 ರಲ್ಲಿ ಕರ್ನಾಟಕಕ್ಕೆ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು. ಕರ್ನಾಟಕ ಕ್ರಿಕೆಟ್ನೊಂದಿಗೆ ನಾಯರ್ ಅವರ ಪ್ರಯಾಣವು ಸುಮಾರು ಎರಡು ದಶಕಗಳನ್ನು ವ್ಯಾಪಿಸಿದೆ. ಕರ್ನಾಟಕ ಪರ ಇದುವರೆಗೆ 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ನಾಯರ್ 48.94 ಸರಾಸರಿಯಲ್ಲಿ 5922 ರನ್ ಗಳಿಸಿದ್ದಾರೆ. ಇದರಲ್ಲಿ 15 ಶತಕ ಹಾಗೂ 27 ಅರ್ಧ ಶತಕಗಳಿವೆ.
ನಾಯರ್ 2014-15ರ ರಣಜಿ ಟ್ರೋಫಿ ಫೈನಲ್ನಲ್ಲಿ ತಮಿಳುನಾಡು ವಿರುದ್ಧ ತ್ರಿಶತಕ ಬಾರಿಸಿದ್ದರು. ನಂತರ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದರು. ಅವರು 2016 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಚೊಚ್ಚಲ ಟೆಸ್ಟ್ ಸರಣಿಯಲ್ಲೇ ತ್ರಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ವಿವೀರೇಂದ್ರ ಸೆಹ್ವಾಗ್ ನಂತರ ಟೆಸ್ಟ್ನಲ್ಲಿ ತ್ರಿಶತಕ ಬಾರಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ನಾಯರ್ ಪಾತ್ರರಾದರು. ಆದರೆ ಆ ಬಳಿಕ ಉತ್ತಮ ಪ್ರದರ್ಶನ ನೀಡದೇ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
