ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಮತ್ತು ಜೆಡಿಎಸ್ನ ಪ್ರಬಲ ನಾಯಕರನ್ನು ಸೇರಿಸಿಕೊಂಡು ಹೆಚ್ಚಿನ ಸ್ಥಾನ ಗಳಿಸಲು ಆಡಳಿತಾರೂಢ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ. ಆದರೆ ಯಾವುದೇ ಪ್ರಮುಖ ನಾಯಕರು ಬಾಗಿಲು ತಟ್ಟದ ಕಾರಣ ಕೆಪಿಸಿಸಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಶನಿವಾರ ರಾತ್ರಿ ಬಿಜೆಪಿಯ ಮಾಜಿ ಶಾಸಕರಾದ ಬಿ.ಸಿ.ಪಾಟೀಲ್, ರಾಜೂಗೌಡ ಮತ್ತಿತರರ ಜತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭ ಖ್ಯಾತ ನಟ ಕಿಚ್ಚ ಸುದೀಪ್ ಅವರು ಹೋಟೆಲ್ನಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸಿದ್ದರು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರ ಜೊತೆ ಡಿಕೆಶಿ ಮಾತು ಬೆರೆತಿದೆ ಎಂದು ವರದಿಯಾಗಿದೆ.
ನಾನು ಬಿಜೆಪಿ ಬಿಡುವುದಿಲ್ಲ: ರಾಜೂಗೌಡ
ಆಪರೇಷನ್ ಮಾಡಿಸಿಕೊಳ್ಳಲು ನನಗೆ ಯಾವುದೇ ಕ್ಯಾನ್ಸರ್ ಗಡ್ಡೆ ಇಲ್ಲ, ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗದಿದ್ದಕ್ಕೆ ಅಸಮಾಧಾನವಿದ್ದರೂ ಪಕ್ಷ ಬಿಡುವುದಿಲ್ಲ ಎಂದು ರಾಜೂಗೌಡ ಹೇಳಿದರು. ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡಿದ್ರೂ ಯಾಕೆ ಸೋತಿದ್ದೀರಿ ಎಂದು ಡಿ.ಕೆ. ಶಿವಕುಮಾರ್ ಜೊತೆಗಿನ ನಮ್ಮ ಸಂಭಾಷಣೆ ಸುದೀಪ್ ಹುಟ್ಟುಹಬ್ಬಕ್ಕಿಂತ ದೊಡ್ಡ ಸುದ್ದಿಯಾಗಿದೆ ಎಂದು ಲೇವಡಿ ಮಾಡಿದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
