fbpx
ಸಮಾಚಾರ

ಚೈತ್ರಾ ಬಳಿಯ ಅಪಾರ ನಗದು ವಶ

MLA ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರಿಂದ 2 ಕೋಟಿ ರೂಪಾಯಿ ನಗದು, ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಂಚನೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಅಲ್ಲದೆ ಮತ್ತೊಬ್ಬ ಆರೋಪಿ ಅಭಿನವ ಹಾಲಶ್ರೀ ಎಂಬಾತನಿಂದ 56 ಲಕ್ಷ ನಗದು ಹಾಗೂ 20 ಲಕ್ಷ ರೂ. ಪ್ರಣವಪ್ರಸಾದ್ ಮತ್ತು ತಿಪ್ಪೇಸ್ವಾಮಿ ಸೇರಿ ನಾಲ್ವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಂತ್ರಸ್ತ ಗೋವಿಂದಬಾಬು ಪೂಜಾರಿಯಿಂದ ಪಡೆದಿದ್ದ ರೂ.3.50 ಕೋಟಿ ನಗದನ್ನು ಚೈತ್ರಾ ಕುಂದಾಪುರ, ಶ್ರೀಕಾಂತ್ ಮತ್ತಿತರರು ಹಂಚಿಕೊಂಡು ವಿವಿಧೆಡೆ ಹೂಡಿಕೆ ಮಾಡಿ ಬ್ಯಾಂಕ್ ಗಳಲ್ಲಿ ಇಟ್ಟಿದ್ದಾರೆ ಎಂದು ತಿಳಿಸಿದರು. ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top